Wednesday, October 9, 2024
Wednesday, October 9, 2024

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನಾಗರಾಜ ಖಾರ್ವಿ

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನಾಗರಾಜ ಖಾರ್ವಿ

Date:

ಕುಂದಾಪುರ: ದಾವಣಗೆರೆಯ ಹರಿಹರದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ನಾಗರಾಜ ಖಾರ್ವಿ ಬ್ರೆಸ್ಟ್ ಸ್ಟ್ರೋಕ್ 50 ಮೀ ಚಿನ್ನ, ಬ್ರೆಸ್ಟ್ ಸ್ಟ್ರೋಕ್ 100 ಮೀ ಚಿನ್ನ, ಬ್ರೆಸ್ಟ್ ಸ್ಟ್ರೋಕ್ 200 ಮೀ ಬೆಳ್ಳಿ, 50×4 ಮೆಡ್ಲೆ ರಿಲೇ ಕಂಚು, 100X4 ಫ್ರೀ ಸ್ಟೈಲ್ ರಿಲೇ ಕಂಚು ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿಯಾಗಿದ್ದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಚುಗೋಡು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ, ಸರಸ್ವತಿ ವಿದ್ಯಾಲಯ ಗಂಗೊಳ್ಳಿಯ ಹಳೆ ವಿದ್ಯಾರ್ಥಿಯಾಗಿದ್ದಾರೆ.
ರೇಷ್ಮೆ ಇಲಾಖೆಯ ಇನ್ಸ್ಪೆಕ್ಟರ್ ಬಿ.ಕೆ.ನಾಯ್ಕ್ ಅವರು ತರಬೇತಿ ನೀಡಿರುತ್ತಾರೆ.

ನಾಗರಾಜ ಖಾರ್ವಿಯವರು ಈ ಹಿಂದೆ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಬಿಗಿದು, ಬೀಗ ಹಾಕಿ ಅರಬ್ಬಿ ಸಮುದ್ರದಲ್ಲಿ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಒಂದು ಕಿ.ಮೀ. ದೂರವನ್ನು ಅತ್ಯಂತ ವೇಗವಾಗಿ ಈಜಿ, ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇ-ಖಾತಾ ಸಂಬಂಧಿತ ಗೊಂದಲಗಳಿಗೆ ವಾರದೊಳಗೆ ಪರಿಹಾರ

ಬೆಂಗಳೂರು, ಅ.8: ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿದ್ದು, ಅವುಗಳನ್ನು ಒಂದು ವಾರದಲ್ಲಿ...

ದಸರಾ ಪ್ರಯುಕ್ತ 2000 ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು, ಅ.8: ದಸರಾ ಮಹೋತ್ಸವದ ಹಿನ್ನೆಲೆ ಕೆಎಸ್‌ಆರ್‌ಟಿಸಿ 2000ಕ್ಕೂ ಅಧಿಕ ವಿಶೇಷ...

ಅಂತಾರಾಷ್ಟ್ರೀಯ ವಿಪತ್ತು ಅಪಾಯ ಕಡಿತ (ಕಡಿಮೆಗೊಳಿಸುವ) ದಿನದ ಕುರಿತಾದ ಜಾಗೃತಿ ಕಾರ್ಯಕ್ರಮ ಉದ್ಘಾಟನೆ

ಮಣಿಪಾಲ, ಅ.8: ಮಣಿಪಾಲದ ಡಾ. ಟಿಎಂಎ ಪೈ ಸಭಾಂಗಣದಲ್ಲಿ ಅಂತರಾಷ್ಟ್ರೀಯ ವಿಪತ್ತು...

ವಿದ್ಯಾರ್ಥಿಗಳಿಗೆ ವೀರಗಾಥಾ ಕಾರ್ಯಕ್ರಮ

ಉಡುಪಿ, ಅ.8: ವಿದ್ಯಾರ್ಥಿಗಳ ಮನಸ್ಸಿನಲ್ಲಿ ದೇಶಪ್ರೇಮ ಮತ್ತು ದೇಶ ಭಕ್ತರ ಕುರಿತು...
error: Content is protected !!