Friday, September 20, 2024
Friday, September 20, 2024

ನಮ್ಮ ಅಂಗಡಿ ಉದ್ಘಾಟನೆ

ನಮ್ಮ ಅಂಗಡಿ ಉದ್ಘಾಟನೆ

Date:

ಮಣಿಪಾಲ: ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್‌ನ ಸ್ನಾತಕೋತ್ತರ ವಿಭಾಗವು ಆಯೋಜಿಸಿದ್ದ ನಮ್ಮ ಅಂಗಡಿಯ ಉದ್ಘಾಟನಾ ಸಮಾರಂಭ ಶುಕ್ರವಾರ ಎಂಐಸಿ ಕ್ಯಾಂಪಸ್‌ನಲ್ಲಿ ನಡೆಯಿತು. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಉದ್ಘಾಟನೆ ನೆರವೇರಿಸಿದರು.

ಬಳಿಕ ಮಾಅತನಾಡಿದ ಅವರು, ಕಳೆದ 19 ವರ್ಷಗಳಿಂದ ಇಂತಹ ಉದಾತ್ತ ಉದ್ದೇಶವನ್ನು ಕೈಗೊಂಡಿರುವ ಸಂಸ್ಥೆ ಮತ್ತು ನಮ್ಮ ಭೂಮಿಯೊಂದಿಗೆ ಸಂಸ್ಥೆಯ ಒಡನಾಟವನ್ನು ಅಭಿನಂದಿಸಿದರು. ಇಂತಹ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಂವಹನ ವಿಭಾಗವು ಮಹತ್ತರವಾದ ಪಾತ್ರವನ್ನು ವಹಿಸುತ್ತದೆ ಎಂದರು.

ಸಂಸ್ಥೆಯ ನಿರ್ದೇಶಕರಾದ ಡಾ. ಪದ್ಮಾರಾಣಿ ಮಾತನಾಡುತ್ತಾ, ನಮ್ಮ ಸ್ಥಳೀಯ ಕುಶಲಕರ್ಮಿಗಳನ್ನು ಉತ್ತೇಜಿಸುವುದು ಮತ್ತು ಸ್ಥಳೀಯರಿಗೆ ಧ್ವನಿ ನೀಡುವುದು ನಮ್ಮ ಅಂಗಡಿಯ ಉದ್ದೇಶವಾಗಿದೆ ಎಂದರು.

ಮಕ್ಕಳ ಕೇಂದ್ರದ ಸಹಾಯಕ ನಿರ್ದೇಶಕ ಶಿವಾನಂದ ಶೆಟ್ಟಿ ಶುಭ ಹಾರೈಸಿದರು. ಎಂಐಸಿಯ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಪ್ರಾಯೋಜಕರಾದ ಐಡಿಪಿ ಕಂಪನಿಯ ಮುಖ್ಯಸ್ಥರಾದ ಶಿಜೋಮನ್ ಯೇಸುದಾಸ್ ಹಾಗೂ ಸೆಲ್ಕೋ ನ ಸಿಇಒ ಗುರುಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಯೋಜನಾ ವ್ಯವಸ್ಥಾಪಕರಾದ ಷಣ್ಮುಖ ಅನಗ್ ಸ್ವಾಗತಿಸಿ, ಉರ್ಬಿ ಚಂದಾ ವಂದಿಸಿದರು. ಕಾರ್ಯಕ್ರಮದ ಅಧ್ಯಾಪಕ ಸಂಯೋಜಕಿ ಸೌಪರ್ಣಿಕಾ ಪವನ್ ಕುಮಾರ್ ಅತ್ತಾವರ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!