Tuesday, February 25, 2025
Tuesday, February 25, 2025

ಸಮಾಜದಿಂದ ಪಡೆದ ಗೌರವ ವ್ಯಕ್ತಿಯ ಜವಾಬ್ದಾರಿಯನ್ನು ಹೆಚ್ಚಿಸುತ್ತದೆ: ನರೇಂದ್ರ ಎಸ್ ಗಂಗೊಳ್ಳಿ

ಸಮಾಜದಿಂದ ಪಡೆದ ಗೌರವ ವ್ಯಕ್ತಿಯ ಜವಾಬ್ದಾರಿಯನ್ನು ಹೆಚ್ಚಿಸುತ್ತದೆ: ನರೇಂದ್ರ ಎಸ್ ಗಂಗೊಳ್ಳಿ

Date:

ಕುಂದಾಪುರ: ಗಂಗೊಳ್ಳಿಯ ಯುವ ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅವರ ಬಹುಮುಖ ಪ್ರತಿಭೆಯನ್ನು ಗುರುತಿಸಿ ತಲ್ಲೂರಿನ ಸಪ್ತಸ್ವರ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ದೇವಾಡಿಗ ಉಪ್ಪಿನಕುದ್ರು ಇವರು ವೈಯಕ್ತಿಕ ನೆಲೆಯಲ್ಲಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಸನ್ಮಾನಿಸಿದರು.

ಬಳಿಕ ಮಾತನಾಡಿದ ಅವರು, ನಮ್ಮ ನಡುವಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿ ಗೌರವಿಸುವ ಕಾರ್ಯ ನಿರಂತರವಾಗಿ ಆಗಬೇಕಿದೆ. ಆ ಮೂಲಕ ಇಂತಹ ಕಾರ್ಯಗಳು ಮತ್ತಷ್ಟು ಪ್ರತಿಭೆಗಳ ಬೆಳವಣಿಗೆಗೆ ಪ್ರೇರಣೆ ಆಗಬೇಕಿದೆ ಎಂದು ಹೇಳಿದರು.

ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ನರೇಂದ್ರ ಎಸ್ ಗಂಗೊಳ್ಳಿ, ಸಮಾಜದಿಂದ ಪಡೆದಂತಹ ಗೌರವ ಎನ್ನುವುದು ವ್ಯಕ್ತಿಯ ನೈತಿಕ ಸ್ಥೈರ್ಯ ಮತ್ತು ಜವಾಬ್ದಾರಿಯನ್ನು ಹೆಚ್ಚಿಸುತ್ತದೆ. ಭವಿಷ್ಯದಲ್ಲಿ ಮತ್ತಷ್ಟು ಸಾಧನೆಗಳನ್ನು ಮಾಡಲು ಪ್ರೇರಣೆಯನ್ನು ನೀಡುತ್ತದೆ ಎಂದು ಅಭಿಪ್ರಾಯಪಟ್ಟರು.

ಗಂಗೊಳ್ಳಿ ದೇವಾಡಿಗ ಸಮಾಜದ ಪ್ರಮುಖರಾದ ಶಂಕರ ದೇವಾಡಿಗ, ನರಸಿಂಹ ದೇವಾಡಿಗ, ರಾಜ ದೇವಾಡಿಗ, ಗುರುರಾಜ ದೇವಾಡಿಗ, ಶ್ರೀಧರ ದೇವಾಡಿಗ, ಮಾಧವ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

ಸವಿತಾ ಉಮಾನಾಥ ದೇವಾಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಂಜುಳ ದೇವಾಡಿಗ ಸ್ವಾಗತಿಸಿ, ರಾಜ ದೇವಾಡಿಗ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!