Sunday, September 8, 2024
Sunday, September 8, 2024

ರಾಷ್ಟ್ರ‍ೀಯ ಕ್ರೀಡಾ ದಿನ-ರಕ್ತದಾನ ಶಿಬಿರ

ರಾಷ್ಟ್ರ‍ೀಯ ಕ್ರೀಡಾ ದಿನ-ರಕ್ತದಾನ ಶಿಬಿರ

Date:

ಮಲ್ಪೆ: ರಾಷ್ಟ್ರ‍ೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ದೈಹಿಕ ಶಿಕ್ಷಣ ವಿಭಾಗ, ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ (ರಿ.), ಲಯನ್ಸ್ ಮತ್ತು ಲಿಯೋ ಕ್ಲಬ್ ಮಲ್ಪೆ, ಉಡುಪಿ ಜಿಲ್ಲಾ ಅಮೆಚೂರ್ ಅತ್ಲೆಟಿಕ್ ಅಸೋಸಿಯೇಶನ್ ಇವರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ಸಂಘಟಿಸಲಾಗಿತ್ತು.

ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಹರಿಯಪ್ಪ ಕೋಟ್ಯಾನ್ ಹಾಗೂ ಸಾಮಾಜಿಕ ಮತ್ತು ಧಾರ್ಮಿಕ ಮುಂದಾಳು ಗೋಪಾಲ ಸಿ. ಬಂಗೇರ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣನಾಥ ಶೆಟ್ಟಿ ಎಕ್ಕಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷರು ಹಾಗೂ ಲಯನ್ಸ್ ಕ್ಲಬ್ ಮಲ್ಪೆ ಇದರ ಅಧ್ಯಕ್ಷರಾದ ಕೃಷ್ಣನಾಂದ ಮಲ್ಪೆ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ದಯಾನಂದ ಶೆಟ್ಟಿ , ಕ್ರೀಡಾ ಯುವಜನ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಅಮೆಚೂರ್ ಅತ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷರಾದ ಡಾ. ಕೆಂಪರಾಜ್, ಮಣಿಪಾಲ ರಕ್ತನಿಧಿಯ ಡಾ. ಶಮ್ಮೀಶಾಸ್ತ್ರಿ, ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕರಾದ ಡಾ. ಸುರೇಶ್ ರೈ ಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ದೈಹಿಕ ಶಿಕ್ಷಣ ಬೋಧಕರಾದ ಡಾ. ರಾಮಚಂದ್ರ ಪಾಟ್ಕರ್ ಸ್ವಾಗತಿಸಿ, ದಯಾನಂದ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಭಾರತದ ಹಾಕಿ ಕ್ರೀಡೆಯ ಧ್ಯಾನ್‌ಚಂದ್ ರವರ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸುವುದರ ಮೂಲಕ ಗೌರವವನ್ನು ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೇಶಕ್ಕೆ ಶಿಕ್ಷಕರ ಸೇವೆ ಮಹತ್ವದ್ದು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಸೆ.7: ಶಿಕ್ಷಕರು ರಾಷ್ಟ್ರಕ್ಕೆ ಅತ್ಯಂತ ಮಹತ್ವದ ಸೇವೆ ಸಲ್ಲಿಸುತ್ತಿದ್ದು, ಇಂದಿನ...

ಸುಳ್ಳು ದಾಖಲೆ ಸೃಷ್ಟಿ: ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್ ಸೇವೆಯಿಂದ ಬಿಡುಗಡೆ

ನವದೆಹಲಿ, ಸೆ.7: 2023 ರ ಬ್ಯಾಚ್ ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್...

18ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ

ಬೆಳ್ಮಣ್, ಸೆ.7: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಮದ್ಯ ಮಾರಾಟ ನಿಷೇಧ

ಉಡುಪಿ, ಸೆ.6: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ...
error: Content is protected !!