Monday, July 27, 2026
Monday, July 27, 2026

ಚಾಂತಾರು: ಹಡಿಲು ಭೂಮಿ ಕೃಷಿ ಕಾರ್ಯಕ್ಕೆ ಚಾಲನೆ

ಚಾಂತಾರು: ಹಡಿಲು ಭೂಮಿ ಕೃಷಿ ಕಾರ್ಯಕ್ಕೆ ಚಾಲನೆ

Date:

ಹಡಿಲು ಭೂಮಿ ಕೃಷಿ ಯೋಜನೆಯಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 31 ಎಕರೆ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗುತ್ತಿದ್ದು, ಚಾಂತಾರು ಅಗ್ರಹಾರದಲ್ಲಿ 8 ಎಕರೆ ಹಡಿಲು ಭೂಮಿ ಕೃಷಿ ಕಾರ್ಯಕ್ಕೆ ಶನಿವಾರ ಚಾಲನೆ ನೀಡಲಾಯಿತು.

ದೀಪ್ತಿ ಎಂಟರ್ಪ್ರೈಸಸ್ ಮುಖ್ಯಸ್ಥರಾದ ಗಣೇಶ್ ನಾಯಕ್ ಕಲ್ಮರ್ಗಿ ಹಾಗೂ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಇರ್ಮಾಡಿ ತಿಮ್ಮಪ್ಪ ಹೆಗ್ಡೆ ಇವರೊಂದಿಗೆ ಶಾಸಕರಾದ ಕೆ. ರಘುಪತಿ ಭಟ್ ರವರು ಭೂಮಿಗೆ ಹಾಲನ್ನು ಅರ್ಪಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೀರಾ ಸದಾನಂದ ಪೂಜಾರಿ, ಉಪಾಧ್ಯಕ್ಷರಾದ ಲಕ್ಷ್ಮೀ, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅಶೋಕ್ ಹೇರೂರು, ವಿಶ್ವನಾಥ ಭಟ್, ರಾಯಪ್ಪ ರೈ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ಕೆ. ರಾಘವೇಂದ್ರ ಕಿಣಿ, ಸದಸ್ಯರಾದ ಪ್ರತಾಪ್ ಹೆಗ್ಡೆ ಮಾರಾಳಿ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸತೀಶ್, ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆತ್ರಾಡಿ ಗ್ರಾಮಸ್ಥರ ಅಹವಾಲು ಸ್ವೀಕಾರ; ವಿವಿಧ ಸವಲತ್ತು ವಿತರಣೆ

ಹಿರಿಯಡಕ, ಜು.27: ಆತ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಪೊಲೀಸ್ ಬ್ಯಾರಿಕೇಡ್‌ಗಳ ಮರುನವೀಕರಣ ಹಾಗೂ ಮೇಲ್ದರ್ಜೆಗೇರಿಸುವ ಕಾರ್ಯಕ್ಕೆ ಚಾಲನೆ

ಉಡುಪಿ, ಜು.27: ಉಡುಪಿ ಜಿಲ್ಲೆಯ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿರುವ ಪೊಲೀಸ್ ಬ್ಯಾರಿಕೇಡ್‌ಗಳ...

ನಟ ಶರಣ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು, ಜು.27: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಶರಣ್ ಅವರು...

ಪಲಿಮಾರು: ಗ್ರಾಮಸ್ಥರ ಅಹವಾಲು ಸ್ವೀಕಾರ; ವಿವಿಧ ಸವಲತ್ತು ವಿತರಣೆ

ಶಿರ್ವ, ಜು.27: ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...
error: Content is protected !!