Sunday, August 30, 2026
Sunday, August 30, 2026

ಕಲ್ಯಾಣಪುರ: 20 ಎಕರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

ಕಲ್ಯಾಣಪುರ: 20 ಎಕರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

Date:

ಹಡಿಲು ಭೂಮಿ ಕೃಷಿ ಆಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 50 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವೇರಿಜಿಡ್ಡ ಸಾಧು ಪೂಜಾರಿಯವರ ಮನೆ ಬಳಿ 20 ಎಕರೆ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಅ.ವ. ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ, ಉಡುಪಿ ಜಿಲ್ಲಾ ಬಿಲ್ಡರ್ಸ್ ಅಸೋಸಿಯೇಷನ್ ಅಧ್ಯಕ್ಷ ಜೆರ್ರಿ ವಿನ್ಸೆಂಟ್ ಡಯಾಸ್, ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಅನಂತಪದ್ಮನಾಭ ಕಿಣಿ, ಮೌಂಟ್ ರೋಸರಿ ಚರ್ಚ್ ಧರ್ಮಗುರುಗಳಾದ ಲೆಸ್ಲಿ ಡಿಸೋಜ, ಮಿಲಾಗ್ರಿಸ್ ಚರ್ಚ್ ಧರ್ಮಗುರುಗಳಾದ ವಲೇರಿಯನ್ ಮೆಂಡೋನ್ಸಾ, ಪೆರಂಪಳ್ಳಿ ಚರ್ಚ್ ಇದರ ರೋಮಿಯೋ ಲೂಯಿಸ್ ಇವರೊಂದಿಗೆ ಶಾಸಕ ಕೆ. ರಘುಪತಿ ಭಟ್ ಅವರು ಭೂಮಿಗೆ ಹಾಲನ್ನು ಅರ್ಪಿಸುವ ಮೂಲಕ ಯಂತ್ರ ನಾಟಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣ ದೇವಾಡಿಗ, ಉಪಾಧ್ಯಕ್ಷ ಉದಯ್ ಪೂಜಾರಿ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ಕೆ. ರಾಘವೇಂದ್ರ ಕಿಣಿ, ಸದಸ್ಯ ದಿನಕರ್ ಬಾಬು, ಸ್ಥಳೀಯರಾದ ಸಾಧು ಪೂಜಾರಿ, ಕಲ್ಯಾಣಪುರ ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಸದಸ್ಯರು ಹಾಗೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೋಗಿತಾ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು, ಕೃಷಿಕರು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!