Friday, September 20, 2024
Friday, September 20, 2024

ಮಕ್ಕಳ ಪ್ರತಿಭೆ ಅನಾವರಣಕ್ಕೆ ಸಂಘಟನೆಗಳು ವೇದಿಕೆ ಕಲ್ಪಿಸಬೇಕು: ರಾಜು ಪೂಜಾರಿ

ಮಕ್ಕಳ ಪ್ರತಿಭೆ ಅನಾವರಣಕ್ಕೆ ಸಂಘಟನೆಗಳು ವೇದಿಕೆ ಕಲ್ಪಿಸಬೇಕು: ರಾಜು ಪೂಜಾರಿ

Date:

ಕೋಟ: ಮಕ್ಕಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಸಂಘಟನೆಗಳು ಮುಂದೆ ಬಂದು ವೇದಿಕೆ ಕಲ್ಪಿಸಿಕೊಟ್ಟಾಗ ಸಣ್ಣ ಹಳ್ಳಿಯ ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಂಡು ಮುಂದೊಂದು ದಿನ ಸಾಧನೆಯ ಹೆಜ್ಜೆಯನ್ನಿಡಲು ಸಾಧ್ಯ. ಮಕ್ಕಳಲ್ಲಿರುವ ಪ್ರತಿಭೆ ಗುರುತಿಸುವಿಕೆ ಪೋಷಕರಿಂದ ಆರಂಭವಾಗಲಿ ಎಂದು ಯುವವಾಹಿನಿ(ರಿ.) ಯಡ್ತಾಡಿ ಘಟಕದ ಅಧ್ಯಕ್ಷ ರಾಜು ಪೂಜಾರಿ ಅವರು ಹೇಳಿದರು.

ಅವರು ಯುವವಾಹಿನಿ(ರಿ.) ಯಡ್ತಾಡಿ ಘಟಕದ ವತಿಯಿಂದ ಗುಲಾಬಿ ಪೂಜಾರ್ತಿ ಅವರ ಮನೆ ವಠಾರದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಆಟೋಟ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇಂದಿನ ಮಕ್ಕಳೇ ಮುಂದಿನ ಸುಶಿಕ್ಷಿತ ಸಮಾಜ ನಿರ್ಮಾಣದ ಶಿಲ್ಪಿಗಳು. ಅವರನ್ನು ಸುಂದರ ಶಿಲ್ಪಿಗಳನ್ನಾಗಿ ರೂಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬಾರ್ಕೂರು ಸ್ವಾಗತ್ ವಿವಿದ್ದೋದೇಶ ಸಹಕಾರಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ ಅವರು ಹೇಳಿದರು.

ನಡೂರು ಬ್ರಿಕ್ಸ್ನ ಮಾಲಕರಾದ ಸಂದೀಪ್ ಪೂಜಾರಿ, ಯುವವಾಹಿನಿಯ ಕಾರ್ಯದರ್ಶಿ ಅಜಿತ್ ಪೂಜಾರಿ, ಸಾಂಸ್ಕೃತಿಕ ನಿರ್ದೇಶಕರಾದ ಪ್ರತಿಮಾ ರಮೇಶ್, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಟೋಟ ಸ್ಪರ್ಧೆಗಳು ಜರಗಿದವು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!