Sunday, August 30, 2026
Sunday, August 30, 2026

ಮಕ್ಕಳ ಪ್ರತಿಭೆ ಅನಾವರಣಕ್ಕೆ ಸಂಘಟನೆಗಳು ವೇದಿಕೆ ಕಲ್ಪಿಸಬೇಕು: ರಾಜು ಪೂಜಾರಿ

ಮಕ್ಕಳ ಪ್ರತಿಭೆ ಅನಾವರಣಕ್ಕೆ ಸಂಘಟನೆಗಳು ವೇದಿಕೆ ಕಲ್ಪಿಸಬೇಕು: ರಾಜು ಪೂಜಾರಿ

Date:

ಕೋಟ: ಮಕ್ಕಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಸಂಘಟನೆಗಳು ಮುಂದೆ ಬಂದು ವೇದಿಕೆ ಕಲ್ಪಿಸಿಕೊಟ್ಟಾಗ ಸಣ್ಣ ಹಳ್ಳಿಯ ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಂಡು ಮುಂದೊಂದು ದಿನ ಸಾಧನೆಯ ಹೆಜ್ಜೆಯನ್ನಿಡಲು ಸಾಧ್ಯ. ಮಕ್ಕಳಲ್ಲಿರುವ ಪ್ರತಿಭೆ ಗುರುತಿಸುವಿಕೆ ಪೋಷಕರಿಂದ ಆರಂಭವಾಗಲಿ ಎಂದು ಯುವವಾಹಿನಿ(ರಿ.) ಯಡ್ತಾಡಿ ಘಟಕದ ಅಧ್ಯಕ್ಷ ರಾಜು ಪೂಜಾರಿ ಅವರು ಹೇಳಿದರು.

ಅವರು ಯುವವಾಹಿನಿ(ರಿ.) ಯಡ್ತಾಡಿ ಘಟಕದ ವತಿಯಿಂದ ಗುಲಾಬಿ ಪೂಜಾರ್ತಿ ಅವರ ಮನೆ ವಠಾರದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಆಟೋಟ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇಂದಿನ ಮಕ್ಕಳೇ ಮುಂದಿನ ಸುಶಿಕ್ಷಿತ ಸಮಾಜ ನಿರ್ಮಾಣದ ಶಿಲ್ಪಿಗಳು. ಅವರನ್ನು ಸುಂದರ ಶಿಲ್ಪಿಗಳನ್ನಾಗಿ ರೂಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬಾರ್ಕೂರು ಸ್ವಾಗತ್ ವಿವಿದ್ದೋದೇಶ ಸಹಕಾರಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ ಅವರು ಹೇಳಿದರು.

ನಡೂರು ಬ್ರಿಕ್ಸ್ನ ಮಾಲಕರಾದ ಸಂದೀಪ್ ಪೂಜಾರಿ, ಯುವವಾಹಿನಿಯ ಕಾರ್ಯದರ್ಶಿ ಅಜಿತ್ ಪೂಜಾರಿ, ಸಾಂಸ್ಕೃತಿಕ ನಿರ್ದೇಶಕರಾದ ಪ್ರತಿಮಾ ರಮೇಶ್, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಟೋಟ ಸ್ಪರ್ಧೆಗಳು ಜರಗಿದವು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!