Monday, February 24, 2025
Monday, February 24, 2025

ಮೀನುಗಾರರಿಗೆ ಕೋವಿಡ್-2ನೇ ಅಲೆಯ ಪರಿಹಾರ ಪ್ಯಾಕೇಜ್

ಮೀನುಗಾರರಿಗೆ ಕೋವಿಡ್-2ನೇ ಅಲೆಯ ಪರಿಹಾರ ಪ್ಯಾಕೇಜ್

Date:

ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ ಲಾಕ್ ಡೌನ್ ಜಾರಿಯಲ್ಲಿದ್ದು. ಇದರಿಂದ ಬಾಧಿತವಾದ ಸಮಾಜದ ವಿವಿಧ ವರ್ಗಗಳಿಗೆ ಪರಿಹಾರದ ಪ್ಯಾಕೇಜ್ ನ್ನು ಸರ್ಕಾರವು ಘೋಷಣೆ ಮಾಡಿದೆ.
ಪ್ರಸ್ತುತ ಸಾಲಿನಲ್ಲಿ ಭಾರತ ಸರ್ಕಾರದ ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ನೋಂದಾಯಿಸಿಕೊಂಡ ಮೀನುಗಾರರಿಗೆ ತಲಾ ರೂ.3000ಗಳ ಪರಿಹಾರವನ್ನು ಕೋವಿಡ್ ಎರಡನೇ ಪ್ಯಾಕೇಜ್ ನಿಧಿಯಡಿಯಲ್ಲಿ ಸರ್ಕಾರದ ಮಾರ್ಗಸೂಚಿ ಮೇರೆಗೆ ಘೋಷಿಸಲಾಗಿದೆ.

ಈ ಯೋಜನೆಯ ಸದರಿ ಪರಿಹಾರವನ್ನು ಡಿ.ಬಿ.ಟಿ (ಡೈರೆಕ್ಟ್ ಬೆನಿಫಿಶರಿ ಟ್ರಾನ್ಸ್ಪರ್ ಪೋರ್ಟಲ್) ಮುಖಾಂತರ ಅರ್ಹ ಫಲಾನುಭವಿಗಳಿಗೆ ಪಾವತಿಸಬೇಕಾಗಿರುವುದರಿಂದ ಎಲ್ಲಾ ಫಲಾನುಭವಿಗಳು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡದಿದ್ದಲ್ಲಿ ಕೂಡಲೇ ಲಿಂಕ್ ಮಾಡಿಸತಕ್ಕದ್ದು.

ಸಾಂಪ್ರದಾಯಿಕ ದೋಣಿ ಮಾಲೀಕರು (ಎನ್ ಎಮ್-ನಾನ್-ಮೋಟರೈಸ್ಡ್ ಅಡಿಯಲ್ಲಿ ನೋಂದಾಯಿತ ದೋಣಿ ಮಾಲೀಕರು) ತಮ್ಮದೋಣಿಯ ಆರ್.ಸಿ., ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಆಧಾರ್ ಲಿಂಕ್ ಲಗತ್ತಿಸಲಾದ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯನ್ನು ಸಂಬಂಧಿತ ಪ್ರಾಧಿಕೃತ ಅಧಿಕಾರಿಗಳ ಕಚೇರಿಗೆ ಒದಗಿಸಬೇಕೆಂದು ಮೀನುಗಾರಿಕೆ ಹಿರಿಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!