Sunday, April 19, 2026
Sunday, April 19, 2026

ಸಿದ್ದರಾಮಯ್ಯ ಅವರಿಂದ ಹಿಂದುತ್ವದ ಪಾಠ ಕಲಿಯುವ ಅಗತ್ಯತೆ ಬಿಜೆಪಿಗಿಲ್ಲ: ಐರೋಡಿ ವಿಠ್ಠಲ್ ಪೂಜಾರಿ

ಸಿದ್ದರಾಮಯ್ಯ ಅವರಿಂದ ಹಿಂದುತ್ವದ ಪಾಠ ಕಲಿಯುವ ಅಗತ್ಯತೆ ಬಿಜೆಪಿಗಿಲ್ಲ: ಐರೋಡಿ ವಿಠ್ಠಲ್ ಪೂಜಾರಿ

Date:

ಕೋಟ: ಈ ಹಿಂದೆ ಸ್ವ ಪಕ್ಷದ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮೇಲೆ ಸ್ವ-ಪಕ್ಷದ ಕಾರ್ಯಕರ್ತರೆಲ್ಲ ಗುಂಪಾಗಿ ಹೋಗಿ ದೌರ್ಜನ್ಯ ಹಿಂಸೆ ಮಾಡಿ ಮನೆ ಆಸ್ತಿ ಪಾಸ್ತಿಗೆ ಬೆಂಕಿ ಇಟ್ಟಾಗ, ಸಿದ್ದರಾಮಯ್ಯ ಅವರಿಗೆ ಇಲ್ಲದ ಕಾಳಜಿ ಈಗ ರಾಜಕೀಯ ಚದುರಂಗದಾಟಕ್ಕೆ ಧಾಳವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿ ಐರೋಡಿ ವಿಠ್ಠಲ ಪೂಜಾರಿ ಹೇಳಿದ್ದಾರೆ.

ಭಾರತೀಯ ಜನತಾ ಪಾರ್ಟಿ ಹಿಂದುತ್ವ, ಸನಾತನ ಧರ್ಮದ ಯಾವುದೇ ಪಂಗಡ ಸಮುದಾಯದವರ ವಿರುದ್ಧ ಎಷ್ಟೇ ಪ್ರಭಾವಿಗಳು ದೌರ್ಜನ್ಯ ಎಸಗಲು ಬಂದರೂ, ಎಸಗಿದರೂ ನಾವು ಖಂಡಾತುಂಡವಾಗಿ ಖಂಡಿಸುತ್ತೇವೆ.

ತಪ್ಪು ಮಾಡಿದ ಯಾವುದೇ ವ್ಯಕ್ತಿಯನ್ನಾಗಲಿ, ಅಧಿಕಾರಿಯನ್ನಾಗಲಿ ರಕ್ಷಣೆ ಮಾಡುವ ಅಗತ್ಯತೆ ನಮಗಿಲ್ಲ. ಈ ನೆಲದ ಕಾನೂನನ್ನು ಗೌರವಿಸುವ ನಾವು ಅಪರಾಧ ಮಾಡಿದವರಿಗೆ ಕಾನೂನಿನ ಚೌಕಟ್ಟಿನಲ್ಲಿ ಶಿಕ್ಷೆಯಾಗಿ ದೌರ್ಜನ್ಯ ಹಿಂಸೆಯಿಂದ ನೊಂದವರಿಗೆ ನ್ಯಾಯ ಸಿಗಬೇಕು ಎನ್ನುವುದು ನಮ್ಮ ಪ್ರಪ್ರಥಮ ಆದ್ಯತೆ ಹಾಗು ಬದ್ಧತೆ ಕೂಡ ಹೌದು.

ಹಾಗಾಗಿ ಸಿದ್ದರಾಮಯ್ಯನವರ ನೀತಿ ಪಾಠ, ಬೋಧನೆಯ ಅವಶ್ಯಕತೆ ಭಾಜಪ ಪಕ್ಷಕ್ಕೆ ಇಲ್ಲ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೊರ್ಚಾ ರಾಜ್ಯ ಕಾರ್ಯದರ್ಶಿ ಐರೋಡಿ ವಿಠ್ಠಲ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರು ಭೂ- ಅಗೆತ ಕಾಮಗಾರಿ ಕೈಗೊಳ್ಳದಂತೆ ಮೆಸ್ಕಾಂನಿಂದ ಸೂಚನೆ

ಉಡುಪಿ, ಏ.18: ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಹಾಲಿ ಇರುವ 33 ಕೆ.ವಿ...

ಉಡುಪಿ ಜ್ಞಾನಸುಧಾ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಉಡುಪಿ, ಏ.18: ಪ್ರಥಮ ಪಿ.ಯು.ಸಿಯಲ್ಲಿ ೧೦೦ಶೇಕಡಾ ಫಲಿತಾಂಶವನ್ನು ನೀಡಿಕೊಂಡು ದ್ವಿತೀಯ ಪಿ.ಯು.ಸಿಯಲ್ಲಿ...

ತ್ರಾಸಿ ಕಡಲ ತೀರ ಸ್ವಚ್ಛತಾ ಕಾರ್ಯಕ್ರಮ

ಕುಂದಾಪುರ, ಏ.18: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ ಗಳನ್ನು ಮಾಡಬೇಕು: ವಿದ್ಯಾರ್ಥಿಗಳಿಗೆ ಡಾ. ಕೃಷ್ಣಮೂರ್ತಿ ಮಕ್ಕಿತ್ತಾಯ ಕರೆ

ನಿಟ್ಟೆ, ಏ.18: ವಿದ್ಯಾರ್ಥಿಗಳು ತಮ್ಮ ಜ್ಞಾನವೃದ್ಧಿಗಾಗಿ ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ ಗಳನ್ನು...
error: Content is protected !!