Friday, September 20, 2024
Friday, September 20, 2024

ಉದ್ಯಮದಲ್ಲಿ ತಾಳ್ಮೆ ಅಗತ್ಯ: ಕೆ.ಸಿ.ಅಮೀನ್

ಉದ್ಯಮದಲ್ಲಿ ತಾಳ್ಮೆ ಅಗತ್ಯ: ಕೆ.ಸಿ.ಅಮೀನ್

Date:

ಬ್ರಹ್ಮಾವರ: ನಾವು ಮಾಡುವ ಉದ್ಯಮದಲ್ಲಿ ಕೆಲವೊಮ್ಮೆ ಏರುಪೇರು ನಡೆಯುವುದು ಸಹಜವಾಗಿರುತ್ತದೆ. ಈ ಸಮಯದಲ್ಲಿ ನಾವು ತಾಳ್ಮೆಯಿಂದ ಅದನ್ನು ಎದುರಿಸಬೇಕು ಎಂದು ಉಡುಪಿ ರೂಫ್ ಪ್ಲಾಸ್ಟ್ ಉದ್ಯಮದ ಮಾಲಕರಾದ ಕೆ.ಸಿ.ಅಮೀನ್ ಹೇಳಿದರು.

ಅವರು ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯಲ್ಲಿ 10 ದಿನಗಳ ಕಾಲ ನಡೆದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಿ, ತಾನು ನಡೆದು ಬಂದ ದಾರಿಯ ಅನುಭವವನ್ನು ಹಂಚಿಕೊಂಡು ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕರಾದ ಲಕ್ಷೀಶ್ ಎ.ಜಿ ವಹಿಸಿ‌ ಮಾತನಾಡಿ, ಬ್ಯಾಂಕಿನ‌ ಜೊತೆ ಉತ್ತಮ ವ್ಯವಹಾರ ನಡೆಸಿ, ಯಶಸ್ವಿ ಉದ್ಯಮಿಗಳಾಗಿ ಎಂದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಕೆ. ಕರುಣಾಕರ ಜೈನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಸಂತೋಷ ಶೆಟ್ಟಿ ವಂದಿಸಿದರು. ಶಿಬಿರಾರ್ಥಿ ವರುಣ ಪ್ರಾರ್ಥಿಸಿದರು, ನೈಯಿಮ್ ಬಾಷ ಕುತ್ಲೂರು, ಸಾಗರ, ಕರವಾರ, ಮಂಜುನಾಥ ಕೊರ್ಗಿ ತರಬೇತಿಯ ಅನುಭವ ಹಂಚಿಕೊಂಡರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!