Monday, February 24, 2025
Monday, February 24, 2025

ಅಮೈ ಮಹಾಲಿಂಗ ನಾಯ್ಕರ ಸಾಧನೆ ಜಗತ್ತಿಗೆ ಸ್ಫೂರ್ತಿ: ಪೇಜಾವರ ಶ್ರೀ

ಅಮೈ ಮಹಾಲಿಂಗ ನಾಯ್ಕರ ಸಾಧನೆ ಜಗತ್ತಿಗೆ ಸ್ಫೂರ್ತಿ: ಪೇಜಾವರ ಶ್ರೀ

Date:

ಬಂಟ್ವಾಳ: ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಸಾಹಸಿ ರೈತ ಅಮೈ ಮಹಾಲಿಂಗ ನಾಯ್ಕರ ತೋಟಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭೇಟಿ ನೀಡಿದರು.

ನಾಯ್ಕರ ತೋಟಕ್ಕೆ ತೆರಳಿದ ಶ್ರೀಗಳು ಭಗೀರಥ ಯತ್ನದಿಂದ ಕೊರೆದ ಸುರಂಗದ ಒಳಹೊಕ್ಕು ಮೆಚ್ಚುಗೆ ವ್ಯಕ್ತಪಡಿಸಿದರು. ಸುರಂಗ ಕೊರೆದು ಗಂಗೆಯನ್ನು ಪಡೆದ ಯಶೋಗಾಥೆಯನ್ನು ನಾಯ್ಕರಿಂದಲೇ ಕೇಳಿ, ತುಂಬಿರುವ ಸಮೃದ್ದ ಜಲಸೆಲೆಯನ್ನು ಕಂಡು ಸಂತಸ ವ್ಯಕ್ತಪಡಿಸಿದರು.

ತೋಟದಲ್ಲಿ ಸಮೃದ್ಧವಾಗಿ ಬೆಳೆದು ನಿಂತು ನಾಯ್ಕರ ಸಾರ್ಥಕ ಶ್ರಮದ ಫಲಕ್ಕೆ ಸಾಕ್ಷಿ ಹೇಳುತ್ತಿರುವ ತೆಂಗು, ಕಂಗು, ಬಾಳೆ, ಮಾವು, ಹಲಸು ಮೊದಲಾದವುಗಳನ್ನು ವೀಕ್ಷಿಸಿದ ಬಳಿಕ ಮನೆಗೆ ಮರಳಿದ ಶ್ರೀಗಳವರಿಗೆ ನಾಯ್ಕರು ಮತ್ತವರ ಮನೆ ಮಂದಿ ಗೌರವಾರ್ಪಣೆಗೈದರು.

ನಾಯ್ಕರ ಕೃಷಿಯ ಅವಿರತ ಸಾಧನೆಯನ್ನು ಮನಸಾರೆ ಬಣ್ಣಿಸಿದ ಶ್ರೀಗಳು ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆಯಾಗಿರುವುದು ಅತ್ಯಂತ ಅಭಿನಂದನೀಯ ಎಂದರು. ಅಮೈ ಮಹಾಲಿಂಗ ನಾಯ್ಕರಿಗೆ ಶಾಲು, ಶ್ರೀಕೃಷ್ಣನ ವಿಗ್ರವಿರುವ ಕಾಷ್ಠ ಮಂಟಪದ ಸ್ಮರಣಿಕೆ, ನಗದು, ಫಲ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಸ್ಥಳೀಯರಾದ ಜನಾರ್ದನ ಭಟ್, ಪಂಚಾಯತ್ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!