Saturday, July 25, 2026
Saturday, July 25, 2026

ಉದಯ ಶೆಟ್ಟಿ ಇವರಿಗೆ ಡಾಕ್ಟರೇಟ್

ಉದಯ ಶೆಟ್ಟಿ ಇವರಿಗೆ ಡಾಕ್ಟರೇಟ್

Date:

ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ ವಾಣಿಜ್ಯ ಸಹಾಯಕ ಪ್ರಾಧ್ಯಪಕರಾಗಿರುವ ಪ್ರೊ. ಉದಯ ಶೆಟ್ಟಿ ಕೆ ಯವರಿಗೆ ಕುಪ್ಪಂನ ದ್ರಾವಿಡ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ. ಇವರು ಸೈಂಟ್ ಅಲೋಷಿಯಸ್ (ಸ್ವಾಯತ್ತ) ಕಾಲೇಜು ಮಂಗಳೂರಿನ ವಾಣಿಜ್ಯಶಾಸ್ತ್ರ ವಿಭಾಗದ ಡೀನ್ ಡಾ. ಸುರೇಶ್ ಪೂಜಾರಿಯವರ ಮಾರ್ಗದರ್ಶನದಲ್ಲಿ ‘ರೂರಲ್ ಮಾರ್ಕೆಟಿಂಗ್ ಸ್ಟ್ರಾಟಜೀಸ್ ಫಾರ್ ಲೈಪ್ ಇನ್ಶೂರೆನ್ಸ್ ಪ್ರೊಡೆಕ್ಟ್ ಎ ಸ್ಟಡಿ ಇನ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್’ ಎಂಬ ವಿಷಯದಲ್ಲಿ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧವನ್ನು ಅಂಗೀಕರಿಸಿ ವಿಶ್ವವಿದ್ಯಾನಿಲಯವು ಪಿಎಚ್‌ಡಿ ಪದವಿಯನ್ನು ನೀಡಿದೆ.

ಪ್ರಸ್ತುತ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಪದವಿ ವಿಭಾಗದ ಮುಖ್ಯಸ್ಥರಾಗಿರುವ ಉದಯ ಶೆಟ್ಟಿ ಕೆ 20 ವರ್ಷಗಳ ಬೋಧನಾನುಭವ ಹೊಂದಿದ್ದು, ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಹಾಗೂ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.

ಭಾರತ ಸ್ಕೌಟ್ ಗೈಡ್ಸ್ ರೋವರ್ ವಿಭಾಗದಲ್ಲಿ ಹಿಮಾಲಯ ವುಡ್‌ಬ್ಯಾಡ್ಜ್ ತರಬೇತಿ ಪಡೆದಿದ್ದು, ಯೂತ್ ರೆಡ್‌ಕ್ರಾಸ್ ಕಾರ್ಯಕ್ರಮ ಅಧಿಕಾರಿ ಹಾಗೂ ಪ್ರಥಮ ಚಿಕಿತ್ಸಾ ತರಬೇತಿದಾರರಾಗಿದ್ದಾರೆ. ಹಲವಾರು ರಾಷ್ಟ್ರ‍ೀಯ ವಿಚಾರ ಸಂಕಿರಣಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದಾರೆ. ಇವರನ್ನು ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!