Saturday, September 28, 2024
Saturday, September 28, 2024

ಪತ್ರ ಲೇಖನ ಹಾಗೂ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

ಪತ್ರ ಲೇಖನ ಹಾಗೂ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

Date:

ಉಡುಪಿ: ಮಕ್ಕಳಲ್ಲಿ ಒತ್ತಡ ಮತ್ತು ಏಕತಾನತೆಯನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಅಂಚೆ ಇಲಾಖೆಯು ಏರ್ಪಡಿಸಿದ್ದ ಆನ್‌ಲೈನ್ ಪತ್ರ ಲೇಖನ ಹಾಗೂ ಚಿತ್ರಕಲಾ ಸ್ಪರ್ಧಾ ವಿಜೇತರಿಗಾಗಿ ಬಹುಮಾನ ವಿತರಣಾ ಸಮಾರಂಭ ಉಡುಪಿ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನಡೆಯಿತು.

ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಉಡುಪಿ ಅಂಚೆ ಅಧೀಕ್ಷಕ ನವೀನ್ ಚಂದರ್ ಬಹುಮಾನ ವಿತರಿಸಿದರು.
ಪತ್ರ ಲೇಖನ ಸ್ಪರ್ದೆಯಲ್ಲಿ ಇಂದ್ರಾಳಿ ಆಂಗ್ಲ ಮಾಧ್ಯಮ ಶಾಲೆಯ ಮಾನ್ಯ (ಪ್ರಥಮ), ಗಗನ್‌ರಾಜ್ (ತೃತೀಯ), ವಳಕಾಡು ಸಂಯುಕ್ತ ಶಾಲೆಯ ಹರ್ಷಿತ್ ಆಚಾರ್ಯ (ದ್ವಿತೀಯ), ಚಿತ್ರಕಲಾ ಸ್ಪರ್ಧೆಯಲ್ಲಿ ವಳಕಾಡು ಸಂಯುಕ್ತ ಶಾಲೆಯ ಕೇದಾರ ನಾಯಕ್ (ಪ್ರಥಮ), ಭಾರ್ಗವಿ ಬಿ ಎಂ (ದ್ವಿತೀಯ) ಇಂದ್ರಾಳಿಯ ಶಾಲೆಯ ಪಂಚಮಿ ಜಿ. ಎಸ್ (ತೃತೀಯ) ಸ್ಥಾನ ಗಳಿಸಿದರು.

ಸಹಾಯಕ ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ ಅಂಚೆ ಚೀಟಿ ಸಂಗ್ರಹ-ಫಿಲಾಟೆಲಿಯ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ಅಂಚೆ ಮಾರ್ಕೆಟಿಂಗ್ ಎಕ್ಸ್ಕ್ಯೂಟಿವ್ ಪೂರ್ಣಿಮಾ ಜನಾರ್ಧನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಸಹಾಯಕ ಅಧೀಕ್ಷಕ ಕೃಷ್ಣರಾಜ ವಿಠ್ಠಲ ಭಟ್ ವಂದಿಸಿದರು. ಅಂಚೆ ವ್ಯಾಪಾ ರಅಭಿವೃದ್ಧಿ ವಿಭಾಗದ ಲೀಲಾವತಿ ತಂತ್ರಿ ಮತ್ತು ಅಂಚೆ ಸಿಬ್ಬಂದಿ ನಿತೇಶ್ ಕಾರ್ಯಕ್ರಮ ಸಂಯೋಜಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತಿಹಾಸ ಲೇಖನಗಳಿಗೆ ಆಹ್ವಾನ

ಉಡುಪಿ, ಸೆ.28: ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ...

ಆರೋಗ್ಯ ನಿಗಾ ಸಹಾಯಕರ ಉದ್ಯೋಗಾಧಾರಿತ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಸೆ.27: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರು ವತಿಯಿಂದ...

‘ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್; ಉಡುಪಿ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ಸುವರ್ಣಾವಕಾಶ

ಉಡುಪಿ, ಸೆ.27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಡುಪಿ ಘಟಕದದಿಂದ...

ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ...
error: Content is protected !!