Monday, February 24, 2025
Monday, February 24, 2025

ಅಕಾಲಿಕ ಮಳೆ, ಸಿಡಿಲು- ಉಡುಪಿ ಜಿಲ್ಲೆಯ ಹಲವೆಡೆ ಹಾನಿ

ಅಕಾಲಿಕ ಮಳೆ, ಸಿಡಿಲು- ಉಡುಪಿ ಜಿಲ್ಲೆಯ ಹಲವೆಡೆ ಹಾನಿ

Date:

ಉಡುಪಿ: ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆ ಹಾಗೂ ಸಿಡಿಲಿನ ಆರ್ಭಟಕ್ಕೆ ಹಲವೆಡೆ ಹಾನಿಯಾಗಿವೆ. ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ಕುಶಲ ನಾಯ್ಕ ಬಿನ್‌ ಪರಮ ನಾಯ್ಕ ಇವರ ಮನೆಯ 2 ಜಾನುವಾರು ಸಿಡಿಲು ಬಡಿದು ಮೃತಪಟ್ಟಿದ್ದು ಅಂದಾಜು ರೂ 60000 ನಷ್ಟವಾಗಿದೆ.

ಕುಂದಾಪುರ ತಾಲೂಕಿನ ಹಾರ್ದಳ್ಳಿ ಮಂಡಳ್ಳಿ ಗ್ರಾಮದ ಬೇಬಿ ಶೆಡ್ತಿ ಇವರ ವಾಸ್ತವ್ಯದ ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು ಅಂದಾಜು ರೂ 75000 ನಷ್ಟವಾಗಿದೆ.

ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ರಮೇಶ್‌ ರಾವ್‌ ಬಿನ್‌ ಅಣ್ಣಪ್ಪಯ್ಯ ಇವರ ವಾಸ್ತವ್ಯದ ಪಕ್ಕಾ ಮನೆ ಸಿಡಿಲು ಬಡಿದು ಭಾಗಶಃ ಹಾನಿಯಾಗಿದ್ದು ಅಂದಾಜು ರೂ 6000 ನಷ್ಟವಾಗಿದೆ.

ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಗ್ರಾಮದ ಮಧುಕರ ಸುವರ್ಣ ಬಿನ್‌ ಶೀನ ಕುಂದರ್‌ ಇವರ ವಾಸ್ತವ್ಯದ ಪಕ್ಕಾ ಮನೆ ಸಿಡಿಲು ಬಡಿದು ಭಾಗಶಃ ಹಾನಿಯಾಗಿ ಅಂದಾಜು 8000 ರೂ ನಷ್ಟವಾಗಿದೆ.

ಬ್ರಹ್ಮಾವರ ತಾಲೂಕಿನ ಪದ್ದು ಗಾಣಿಗ ಬಿನ್‌ ಮಾಧವ ಇವರ ವಾಸ್ತವ್ಯದ ಪಕ್ಕಾ ಮನೆ ಗಾಳಿ ಮಳೆಯಿಂದ ಭಾಗಶಃ ಹಾನಿಯಾಗಿ ಅಂದಾಜು ರೂ 20000 ನಷ್ಟವಾಗಿದೆ.

ಬ್ರಹ್ಮಾವರ ತಾಲೂಕಿನ 38 ಕಳ್ತೂರು ಗ್ರಾಮದ ಶಾರದಾ ಬಾಯಿ ಕೋಂ ಸುಬ್ಬ ನಾಯ್ಕ ಇವರ ವಾಸ್ತವ್ಯದ ಪಕ್ಕಾ ಮನೆ ಗಾಳಿ ಮಳೆಯಿಂದ ಭಾಗಶಃ ಹಾನಿಯಾಗಿ ಅಂದಾಜು ರೂ 40000 ನಷ್ಟವಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!