Sunday, February 23, 2025
Sunday, February 23, 2025

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ

Date:

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಗ್ರಾಮ ಪಂಚಾಯತ್ ಮಟ್ಟಕ್ಕೆ ಬೆಳೆ ವಿಮೆ ಯೋಜನೆಯಡಿ ನೋಂದಾಣಿಗಾಗಿ ಅಧಿಸೂಚಿಸಲಾಗಿದೆ. ಮುಂಗಾರು ಹಂಗಾಮಿನ ಅಧಿಸೂಚಿತ ಬೆಳೆಯ ವಿವರ: ಅಧಿಸೂಚಿತ ಬೆಳೆ ಭತ್ತ (ಮಳೆಯಾಶ್ರಿತ), ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳು ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳು ಅಧಿಸೂಚಿತ ಘಟಕಗಳಾಗಿದ್ದು, ವಿಮಾ ಮೊತ್ತ ಪ್ರತಿ ಹೆ.ಗೆ ರೂ. 55000, ವಿಮಾ ಕಂತಿನ ದರ ಪ್ರತಿ ಹೆ.ಗೆ ರೂ 1100(2%) ಆಗಿರುತ್ತದೆ.

ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದ್ದು, ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ/ಪಾಸ್ ಪುಸ್ತಕ, ಕಂದಾಯ ರಶೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ ಸ್ಥಳೀಯ ಸಾಲ ನೀಡುವ ವಾಣಿಜ್ಯ ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೊಂದಾಯಿಸಿಕೊಳ್ಳಬಹುದಾಗಿದೆ.

ಬೆಳೆ ಸಾಲ ಪಡೆದ ರೈತರು ಬೆಳೆ ವಿಮೆಯಲ್ಲಿ ಭಾಗವಹಿಸಲು ಇಚ್ಛಿಸದಿದ್ದಲ್ಲಿ ಬ್ಯಾಂಕಿನ ವ್ಯವಸ್ಥಾಪಕರಿಗೆ ಜುಲೈ 24 ಕ್ಕಿಂತ ಮೊದಲು ಈ ಕುರಿತು ಮುಚ್ಚಳಿಕೆ ಪತ್ರ ನೀಡಿ ಬೆಳೆ ವಿಮೆಯಿಂದ ಕೈಬಿಡಲು ಕೋರಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಕೃಷಿ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿದೇರ್ಶಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!