Sunday, February 23, 2025
Sunday, February 23, 2025

ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಜಿಲ್ಲೆಯ ವತಿಯಿಂದ ’ರಾಯಣ್ಣ ಪುರಸ್ಕಾರ’

ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಜಿಲ್ಲೆಯ ವತಿಯಿಂದ ’ರಾಯಣ್ಣ ಪುರಸ್ಕಾರ’

Date:

ಉಡುಪಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತನ್ನ 33ನೇ ವರ್ಷದಲ್ಲಿ ಹುತಾತ್ಮರಾಗಿದ್ದರೂ ಅವರ ಕೆಚ್ಚೆದೆಯ ಸ್ವಾರ್ಥರಹಿತ ದೇಶ ಸೇವೆಯಿಂದಾಗಿ ಇನ್ನೂ ಜನಮಾನಸದಲ್ಲಿ ಅವರ ಹೆಸರು ಶಾಶ್ವತವಾಗಿ ಉಳಿದಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಅವರು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಜಿಲ್ಲೆಯ ವತಿಯಿಂದ ಕೇಂದ್ರ ಕಚೇರಿ ಆದಿಉಡುಪಿಯ ರಿಗಲ್ ನೆಕ್ಸ್ಟ್ ನಲ್ಲಿ ನಿವೃತ್ತಿ ಹೊಂದಿದ ಯೋಧ ಕೃಷ್ಣ ಶೆಟ್ಟಿಬೆಟ್ಟು ಇವರಿಗೆ ’ರಾಯಣ್ಣ ಪುರಸ್ಕಾರ’ ಪ್ರದಾನ ಮಾಡಿ ಮಾತನಾಡಿದರು. ಯಾವುದೇ ಸರಕಾರ ಬರಲಿ ರೈತರು ಹಾಗೂ ಯೋಧರ ಬಗ್ಗೆ ನಿರ್ಲಕ್ಷ ಧೋರಣೆ ಇರಬಾರದು ಎಂದರು.

ಅಭಿಮಾನಿ ಬಳಗದ ರಾಜ್ಯ ಸಂಸ್ಥಾಪಕಾಧ್ಯಕ್ಷ ಸುರೇಶ್ ಗೋಕಾಕ್ ಸಭಾಧಯಕ್ಷತೆಯನ್ನು ವಹಿಸಿದ್ದರು. ಅತಿಥಿಗಳಾಗಿ ಗಣೇಶ್ ಸಿ ಬೆಂಗಳೂರು, ಮಂಜುನಾಥ್ ಆರ್ ಚಿತ್ರದುರ್ಗ, ರಾಮ ಸೇನಾ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಜಯ ಪೂಜಾರಿ, ಕರಾಟೆ ಶಿಕ್ಷಕಿ ಪ್ರವೀಣ, ಉದ್ಯಮಿ ಶಾಂತಗೌಡ ಎಮ್ ಚೌದ್ರಿ ಹಾಗೂ ಗೌರಿ ಕೃಷ್ಣ ಶೆಟ್ಟಿಬೆಟ್ಟು ಉಪಸ್ಥಿತರಿದ್ದರು.

ಅಭಿಮಾನಿ ಬಳಗ ಉಡುಪಿ ಜಿಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಸ್ವಾಗತಿಸಿ, ಪ್ರಸ್ಥಾಪಿಸಿದರು. ಸವಿತಾ ನೋಟಗಾರ್ ಧನ್ಯವಾದವಿತ್ತರು. ಜನಾರ್ದನ್ ಕೊಡವೂರು ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!