Home ಸುದ್ಧಿಗಳು ಪ್ರಾದೇಶಿಕ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ- ‘ರಾಯಣ್ಣ ಪುರಸ್ಕಾರ’ ಪ್ರದಾನ ಸಮಾರಂಭ

ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ- ‘ರಾಯಣ್ಣ ಪುರಸ್ಕಾರ’ ಪ್ರದಾನ ಸಮಾರಂಭ

526
0

ಉಡುಪಿ: ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಜಿಲ್ಲೆಯ ವತಿಯಿಂದ ನಿವೃತ್ತಿ ಹೊಂದಿದ ವೀರ ಯೋಧನಿಗೆ ‘ರಾಯಣ್ಣ ಪುರಸ್ಕಾರ’ ಪ್ರದಾನ ಸಮಾರಂಭ ಹಾಗು ಮೆರವಣಿಗೆಯು ಅಕ್ಟೋಬರ್ 6 ಬುಧವಾರ ಮಧ್ಯಾಹ್ನ 2.30ಕ್ಕೆ ಸಂಘಟನೆಯ ಕೇಂದ್ರ ಕಚೇರಿ ಆದಿ ಉಡುಪಿಯ ರಿಗಲ್ ನೆಕ್ಸ್ಟ್ ನಲ್ಲಿ ನಡೆಯಲಿದೆ.

ಉಡುಪಿ ಶಾಸಕ ಕೆ. ರಘುಪತಿ ಭಟ್ ನಿವೃತ್ತ ಯೋಧ ಕೃಷ್ಣ ಶೆಟ್ಟಿಬೆಟ್ಟು ಇವರಿಗೆ ರಾಯಣ್ಣ ಪುರಸ್ಕಾರ ಪ್ರದಾನ ಮಾಡಲಿರುವರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮೆರವಣಿಗೆಗೆ ಚಾಲನೆ ನೀಡಲಿರುವರು. ಸಭಾಧ್ಯಕ್ಷತೆಯನ್ನು ಅಭಿಮಾನಿ ಬಳಗ ಉಡುಪಿ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಅಭಿಮಾನಿ ಬಳಗದ ರಾಜ್ಯ ಸಂಸ್ಥಾಪಕಾಧ್ಯಕ್ಷ ಸುರೇಶ್ ಗೋಕಾಕ್, ಪತ್ರಕರ್ತ ಜನಾರ್ದನ್ ಕೊಡವೂರು, ಭಾಗ್ಯಶ್ರೀ ಬಾಬಣ್ಣ, ಮಂಜುನಾಥ ನೋಟಗಾರ್, ಮಂಜು ಚಿತ್ರದುರ್ಗ, ಗಣೇಶ್ ಸಿ ಬೆಂಗಳೂರು ಹಾಗೂ ಗೌರಿ ಕೃಷ್ಣ ಶೆಟ್ಟಿಬೆಟ್ಟು ಭಾಗವಹಿಸಲಿದ್ದಾರೆ.

ಬಳಿಕ ಆದಿಉಡುಪಿ ಕೇಂದ್ರ ಕಚೇರಿಯಂದ ಕರಾವಳಿ, ಬನ್ನಂಜೆ, ಸಿಟಿ ಬಸ್‌ಸ್ಟಾಂಡ್, ಕಲ್ಸಂಕ, ಕಡಿಯಾಳಿ, ಮಣಿಪಾಲ ಮಾರ್ಗವಾಗಿ ಪರ್ಕಳದವರೆಗೆ ಮೆರವಣಿಗೆ ಸಾಗಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಪ್ರದಾನ ಕಾರ್ಯದರ್ಶಿ ಮಹೇಶ್ ಗುಂಡಿಬೈಲು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.