Thursday, October 10, 2024
Thursday, October 10, 2024

ಜಗತ್ತಿನ ಶ್ರೇಷ್ಠ ಭಾಷೆ ಕನ್ನಡ: ಪದ್ಮನಾಭ ಕಾಂಚನ್

ಜಗತ್ತಿನ ಶ್ರೇಷ್ಠ ಭಾಷೆ ಕನ್ನಡ: ಪದ್ಮನಾಭ ಕಾಂಚನ್

Date:

ಬ್ರಹ್ಮಾವರ: ಮಹಾತ್ಮಾ ಗಾಂಧಿ ಪ್ರೌಢ ಶಾಲೆ ಸಾಯ್ಬ್ರಕಟ್ಟೆ ಹಾಗೂ ರೋಟರಿ ಕ್ಲಬ್ ಸಾಯ್ಬ್ರಕಟ್ಟೆ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು.

ಮುಖ್ಯ ಅಭ್ಯಾಗತರಾಗಿ ರೋಟರಿ ವಲಯ 3 ರ ಸಹಾಯಕ ಗವರ್ನರ್ ಕೆ. ಪದ್ಮನಾಭ ಕಾಂಚನ್ ಕನ್ನಡಕ್ಕೂ ಜಗತ್ತಿನ ಶ್ರೇಷ್ಠ ಭಾಷೆಯಾಗುವ ಅರ್ಹತೆಯಿದೆ, ಆ ಹಿನ್ನೆಲೆಯಲ್ಲಿ ನಾವೆಲ್ಲರೂ ಕನ್ನಡಕ್ಕಾಗಿ ತಮ್ಮನ್ನು ಸಮರ್ಪಿಸಬೇಕೆಂದು ಕರೆಯಿತ್ತರು.

ದಾನಿಗಳಾದ ಸಂದೀಪ್ ಶೆಟ್ಟಿಯರು ಸಮವಸ್ತ್ರಗಳನ್ನು ವಿತರಿಸಿ ಮಾತನಾಡುತ್ತಾ, 1956 ರಲ್ಲಿ ಉದಯವಾದ ಮೈಸೂರು ಸಂಸ್ಥಾನವು 1973 ರಂದು ಕರ್ನಾಟಕ ಎಂದು ಮರುನಾಮಕರಣವಾಯಿತು. ಆದರೆ ಕರ್ನಾಟಕದ ಏಕೀಕರಣಕ್ಕೆ 1905ರಲ್ಲೇ ಆಲೂರು ವೆಂಕಟರಾಯರು ಮೊದಲು ನಾಂದಿ ಹಾಡಿದ್ದರೆಂಬುದನ್ನು ಸ್ಮರಿಸಬೇಕಾಗಿದೆ ಎಂದರು.

ಸಮಾರಂಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ರವೀಂದ್ರನಾಥ ಶೆಟ್ಟಿ, ಕಾರ್ಯದರ್ಶಿ ಕೆ. ಪ್ರಸಾದ್ ಶೆಟ್ಟಿ, ಡಾ. ಸುರೇಶ್ ಶೆಟ್ಟಿ, ರೋಟರಿ ಸಾಯ್ಬ್ರಕಟ್ಟೆಯ ಕಾರ್ಯದರ್ಶಿ ಅಣ್ಣಯ್ಯದಾಸ್, ರೋಟರಿಯ ಸಕಲ ಪದಾಧಿಕಾರಿಗಳು ಹಾಗೂ ಶಾಲೆಯ ಇಂಟರಾಕ್ಟ್ ಕ್ಲಬ್ ಅಧ್ಯಕ್ಷೆ ಮಾನ್ಯ ಉಪಸ್ಥಿತರಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಅಧ್ಯಕ್ಷ ಯು ಪ್ರಸಾದ್ ಭಟ್ ವಹಿಸಿ ಆಡುವ ಭಾಷೆಯಲ್ಲೂ ವೈಜ್ಞಾನಿಕವಾಗಿ ಆಲೋಚಿಸುವ, ತನ್ಮೂಲಕ ಸೇವೆಯ ಮೂಲಕ ಬದುಕು ಬದಲಾಯಿಸುವ ಆಶಯ ಬೆಳೆಸಿಕೊಳ್ಳೋಣ ಎಂಬ ಸಂದೇಶ ಸಾರಿದರು.

ಶಾಲಾ ಮುಖ್ಯ ಶಿಕ್ಷಕ ಸತೀಶ್ ನಾಯ್ಕ್ ಸ್ವಾಗತಿಸಿ, ಸಹ ಶಿಕ್ಷಕಿ ಡೈಸಿ ಡಿ ಸಿಲ್ವ ವಂದಿಸಿದರು. ಶಿಕ್ಷಕ ಶಿರಿಯಾರ ಗಣೇಶ ನಾಯಕ್ ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರತನ್ ಟಾಟಾ ವಿಧಿವಶ

ಮುಂಬಯಿ, ಅ.10: ಟಾಟಾ ಸನ್ಸ್‌ನ ರತನ್ ಟಾಟಾ ಬುಧವಾರ ನಿಧನರಾದರು. ಅವರಿಗೆ...

ಅ.11: ಉಡುಪಿ ನಗರದಲ್ಲಿ ಕಸ ಸಂಗ್ರಹಣೆ ಇಲ್ಲ

ಉಡುಪಿ, ಅ.9: ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 11 ರಂದು ನಗರ...

ಯುವಜನರು ಸ್ವಯಂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು: ವಾರ್ತಾಧಿಕಾರಿ ಮಂಜುನಾಥ್ ಬಿ

ಉಡುಪಿ, ಅ.9: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಎನ್.ಎಸ್.ಎಸ್ ನಂತಹ ಕಾರ್ಯಚಟುವಟಿಕೆಗಳಲ್ಲಿ...

ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ

ಉಡುಪಿ, ಅ.9: 14 ವರ್ಷದೊಳಗಿನ ಬಾಲ ಕಾರ್ಮಿಕರುಗಳು ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ...
error: Content is protected !!