Home ಸುದ್ಧಿಗಳು ಪ್ರಾದೇಶಿಕ ಶ್ರೀ ವೆಂಕಟರಮಣ ದೇವಳಕ್ಕೆ ಗೋಕರ್ಣ ಮಠಾಧೀಶರ ಭೇಟಿ

ಶ್ರೀ ವೆಂಕಟರಮಣ ದೇವಳಕ್ಕೆ ಗೋಕರ್ಣ ಮಠಾಧೀಶರ ಭೇಟಿ

310
0
ಚಿತ್ರ: ಮಂಜು ನೀರೇಶ್ವಾಲ್ಯ

ಮಂಗಳೂರು, ಮೇ 20: ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಮಠದ ಮಠಾಧೀಶರಾದ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೆರ್ ಸ್ವಾಮೀಜಿಯವರು ಪ್ರಥಮ ಬಾರಿ ಶನಿವಾರ ಶ್ರೀ ದೇವಳಕ್ಕೆ ಭೇಟಿ ನೀಡಿದರು. ಸಮಸ್ತ ಮಂಗಳೂರಿನ ಜಿ.ಯಸ್.ಬಿ ಸಮಾಜ ಬಾಂಧವರ ಪರವಾಗಿ ಶ್ರೀಗಳವರಿಗೆ ಸಕಲ ಬಿರುದಾವಳಿ ಹಾಗೂ ಪೂರ್ಣ ಕುಂಭ ಸ್ವಾಗತ ಕಾರ್ಯಕ್ರಮ ಜರಗಿತು.

ಶ್ರೀಗಳವರ ಆಗಮನ ಬಳಿಕ ಶ್ರೀ ದೇವಳದ ವಸಂತ ಮಂಟಪದಲ್ಲಿ ಹತ್ತು ಸಮಸ್ತರ ಪರವಾಗಿ ದೇವಳದ ಮೊಕ್ತೇಸರರಿಂದ ಶ್ರೀಗಳವರ ಪಾದಪೂಜೆ ನಡೆಯಿತು.

ಚಿತ್ರ: ಮಂಜು ನೀರೇಶ್ವಾಲ್ಯ

ಬಳಿಕ ಶ್ರೀಗಳವರಿಂದ ಆಶೀರ್ವಚನ ನಡೆಯಿತು. ನೆರೆದ ಸರ್ವರಿಗೂ ಶ್ರೀಗಳು ಫಲ ಮಂತ್ರಕ್ಷತೆ ನೀಡಿದರು. ರಾತ್ರಿ ಶ್ರೀ ವೀರ ವೆಂಕಟೇಶ ದೇವರ ರಾತ್ರಿ ಪೂಜೆ ಶ್ರೀ ದೇವರಿಗೆ ಶ್ರೀಗಳಿಂದ ಮಹಾ ಮಂಗಳಾರತಿ ನೆರವೇರಿತು.

ಚಿತ್ರ: ಮಂಜು ನೀರೇಶ್ವಾಲ್ಯ

ಈ ಸಂದರ್ಭದಲ್ಲಿ ಶ್ರೀ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ, ಸಾಹುಕಾರ್ ಕಿರಣ್ ಪೈ, ಸತೀಶ್ ಪ್ರಭು, ಕೆ. ಗಣೇಶ್ ಕಾಮತ್, ಜಗನ್ನಾಥ್ ಕಾಮತ್ ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.