Wednesday, February 26, 2025
Wednesday, February 26, 2025

ಕಲ್ಲಬೆಟ್ಟು: ಶಾಲಾ ಔಷಧಿ ವನದ ಉದ್ಘಾಟನೆ; 250 ಸಸ್ಯಗಳ ನಾಟಿ

ಕಲ್ಲಬೆಟ್ಟು: ಶಾಲಾ ಔಷಧಿ ವನದ ಉದ್ಘಾಟನೆ; 250 ಸಸ್ಯಗಳ ನಾಟಿ

Date:

ಮೂಡುಬಿದಿರೆ, ಆ. 10: ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಔಷಧೀಯ ಸಸ್ಯಗಳ ಪ್ರಾಧಿಕಾರ ಸಹಯೋಗದಲ್ಲಿ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆ ಆವರಣದಲ್ಲಿ ಗುರುವಾರ ‘ಶಾಲಾ ಔಷಧಿ ವನವನ್ನು ಸಸ್ಯಗಳ ನಾಟಿ ಮೂಲಕ ಉದ್ಘಾಟಿಸಲಾಯಿತು. ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್ ಹಾಗೂ ಸುರೇಶ್ ಕೋಟ್ಯಾನ್ ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ದ್ರವ್ಯಗುಣ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಸುಬ್ರಹ್ಮಣ್ಯ ಪದ್ಯಾಣ ಮಾತನಾಡಿ, ಔಷಧೀಯ ಸಸ್ಯಗಳ ಮಹತ್ವವನ್ನು ತಿಳಿಸಿದರು.

ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲಾ ಪ್ರಾಂಶುಪಾಲ ಸಂಗಯ್ಯ ಬಸಯ್ಯ ಹಿರೇಮಠ ದೈನಂದಿನ ಜೀವನದಲ್ಲಿ ಸಸ್ಯದ ಬಳಕೆ ಕುರಿತು ಮಾಹಿತಿ ನೀಡಿದರು. ಉಪನ್ಯಾಸಕರು, ವಿದ್ಯಾರ್ಥಿಗಳು ಸೇರಿದಂತೆ್ ಪಾಲ್ಗೊಂಡವರು ಬಿಲ್ವಪತ್ರೆ, ಕದಿರ, ಅಶ್ವತ್ಥ, ಚಂದನ, ರಕ್ತಚಂದನ ಶಾಂತಿ ನೆಲ್ಲಿ ಸೇರಿದಂತೆ ಸುಮಾರು 120 ಪ್ರಭೇದಗಳ 250 ಸಸಿ ನೆಟ್ಟರು. ವಿದ್ಯಾರ್ಥಿಗಳು ಮುಂದಿನ ಐದು ವರ್ಷಗಳವರೆಗೆ ಈ ಸಸ್ಯಗಳ ಪಾಲನೆ ಮಾಡಲಿದ್ದಾರೆ. ಡಾ. ಕ್ಷಮಾ ಜೈನ್ ಕಾರ್ಯಕ್ರಮ ನಿರೂಪಿಸಿದರು. ಡಾ. ಲಕ್ಷ್ಮೀ ಪೈ ವಂದಿಸಿದರು. ಬಳಿಕ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!