Wednesday, February 26, 2025
Wednesday, February 26, 2025

ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಕಂಡಕ್ಟರ್ ಸಾವು

ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಕಂಡಕ್ಟರ್ ಸಾವು

Date:

ಮಂಗಳೂರು, ಆ. 30: ಚಲಿಸುತ್ತಿದ್ದ ಬಸ್ ನಿಂದ ಆಕಸ್ಮಿಕವಾಗಿ ಬಿದ್ದು ಕಂಡಕ್ಟರ್ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ನಂತೂರು ಸರ್ಕಲ್ ಬಳಿ ಘಟನೆ ನಡೆದಿದ್ದು, ಮೃತಪಟ್ಟ ವ್ಯಕ್ತಿ ಬಾಗಲಕೋಟೆ ನಿವಾಸಿ ಈರಯ್ಯ ಎಂದು ಗುರುತಿಸಲಾಗಿದೆ.

ಏನಾಗಿತ್ತು?: ಬಸ್ ನ ಎದುರಿನ ಬಾಗಿಲಿನ ಫುಟ್ ಬೋರ್ಡ್ ನಲ್ಲಿ ಕಂಡಕ್ಟರ್ ನಿಂತಿದ್ದರು. ತಿರುವಿನಲ್ಲಿ ಬಸ್ ಚಲಿಸುತ್ತಿದ್ದಾಗ ನಿಯಂತ್ರಣ ತಪ್ಪಿದ ಇವರು ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡರು. ತಕ್ಷಣ ಅಲ್ಲೇ ಇದ್ದ ಸಂಚಾರಿ ಪೊಲೀಸ್ ಪೇದೆಯೊಬ್ಬರು ಅವರನ್ನು ಸ್ಥಳೀಯರ ನೆರವಿನಿಂದ ಆಟೋದಲ್ಲಿ ಆಸ್ಪತ್ರೆಗೆ ದಾಖಲಿಸಿದರು. ಅಷ್ಟು ಹೊತ್ತಿಗಾಗಲೇ ಈರಯ್ಯ ಸಾವನ್ನಪ್ಪಿದ್ದರು ಎಂದು ಹೇಳಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಈರಯ್ಯ ಅಪಘಾತಕ್ಕೀಡಾದ ವಿಡಿಯೋ ವೈರಲ್ ಆಗಿದ್ದು ಈ ವಿಡಿಯೋ ಸ್ಥಳದಲ್ಲಿದ್ದ ಕಾರೊಂದರ ಡ್ಯಾಶ್ ಬೋರ್ಡ್ ಕ್ಯಾಮೆರಾದಲ್ಲಿ ದಾಖಲಾಗಿದ್ದು ಎನ್ನಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!