Home ಸುದ್ಧಿಗಳು ಪ್ರಾದೇಶಿಕ ತುಳುನಾಡಿನ ಸಂಸ್ಕೃತಿಯನ್ನು ಉಳಿಸುವ ಕೆಲಸವಾಗಬೇಕು: ಡಾ. ಜಯಕರ ಭಂಡಾರಿ ಎಮ್

ತುಳುನಾಡಿನ ಸಂಸ್ಕೃತಿಯನ್ನು ಉಳಿಸುವ ಕೆಲಸವಾಗಬೇಕು: ಡಾ. ಜಯಕರ ಭಂಡಾರಿ ಎಮ್

225
0

ಮಂಗಳೂರು, ನ.13: ತುಳು ಸಂಸ್ಕೃತಿ ಪರಂಪರೆಯ ಕೃಷಿ ಸಂಸ್ಕೃತಿ, ಭೂತಾರಾಧನೆ, ನಾಗಾರಾಧನೆ, ಯಕ್ಷಗಾನ ಮತ್ತು ಅದರ ಪಸರಿಸುವಿಕೆಯ ಮಹತ್ವವನ್ನು ಮತ್ತು ಈಗಿನ ದಿನಗಳಲ್ಲಿ ಕೃಷಿ ಸಂಸ್ಕೃತಿಯ ಆಚಾರ ವಿಚಾರಗಳು ಮಾಯವಾಗುತ್ತಿರುವುದು ಬೇಸರದ ಸಂಗತಿ ಎಂದು ಮ್ಯಾಪ್ಸ್ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ, ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಉಪಕುಲಸಚಿವ ಡಾ. ಪ್ರಭಾಕರ ನೀರುಮಾರ್ಗ ವಿಷಾದ ವ್ಯಕ್ತಪಡಿಸಿದರು. ಅವರು ನಗರದ ರಥಬೀದಿಯಲ್ಲಿರುವ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ತುಳು ವಿಭಾಗ, ಲಲಿತ ಕಲಾ ಸಂಘ ಮತ್ತು ತುಳು ಪರಿಷತ್ ಮಂಗಳೂರು ಇದರ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ತುಳು ಐಸಿರೊ-2023 ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ತುಳು ವೈವಿಧ್ಯ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತುಳು ಸಂಸ್ಕೃತಿಯ ಆಚಾರ ವಿಚಾರ ಹಾಗೂ ಕೃಷಿಯನ್ನು ಉಳಿಸಲು ಇಂತಹ ಕಾರ್ಯಕ್ರಮಗಳು ಅಗತ್ಯ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಎಮ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ತುಳು ಭಾಷೆಯನ್ನು ಮಾತನಾಡುವುದು ಮಾತ್ರವಲ್ಲ, ಇಲ್ಲಿಯ ಸಂಸ್ಕೃತಿಯನ್ನು ಉಳಿಸುವ ಕೆಲಸವಾಗಬೇಕು ಎಂದರು. ಉದ್ಯಮಿ ನಿತ್ಯಾನಂದ ಭಂಡಾರಿ ತಲಪಾಡಿ, ಪ್ರೊ. ವಸಂತಿ, ಡಾ. ಎಂ. ಸುಧಾಕರ್ ಮತ್ತಿತರರು ಉಪಸ್ಥಿತರಿದ್ದರು. ಡಾ. ಜೋತಿಪ್ರಿಯಾ ಸ್ವಾಗತಿಸಿ, ಡಾ. ಕೃಷ್ಣಪ್ರಭಾ ವಂದಿಸಿದರು. ಶ್ರುತನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಮಗ್ರ ಬಹುಮಾನವನ್ನು ಸ.ಪ್ರ.ದ.ಕಾಲೇಜು ಬೆಳ್ತಂಗಡಿ ಪಡೆದರೆ, ಎಂ.ಪಿ.ಎಂ.ಸ.ಪ್ರ.ದ.ಕಾಲೇಜು ಕಾರ್ಕಳ ದ್ವಿತೀಯ, ಸ. ಪ್ರ. ದ.ಕಾಲೇಜು ವಾಮದಪದವು ತೃತೀಯ ಬಹುಮಾನ ಪಡೆದುಕೊಂಡಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.