Saturday, October 19, 2024
Saturday, October 19, 2024

ಆವಿಷ್ಕಾರದ ಫಲ ಸಮುದಾಯಕ್ಕೆ ತಲುಪಲಿ: ಎಮಿಲಿ

ಆವಿಷ್ಕಾರದ ಫಲ ಸಮುದಾಯಕ್ಕೆ ತಲುಪಲಿ: ಎಮಿಲಿ

Date:

ಮೂಡುಬಿದಿರೆ, ನ.25: ಆವಿಷ್ಕಾರದ ಫಲ ಸಮುದಾಯಕ್ಕೆ ತಲುಪಿದಾಗ ಸಾರ್ಥಕವಾಗುತ್ತದೆ ಎಂದು ಅಮೆರಿಕ ಫ್ಲಾರಿಡಾದ ಹೂಡಿಕೆ ಬ್ಯಾಂಕರ್ ಎಮಿಲಿ ಆಳ್ವ ಹೇಳಿದರು. ಭಾರತೀಯ ವಿಜ್ಞಾನ ಸಮಾಜ(ಇಂಡಿಯನ್ ಸೈನ್ಸ್ ಸೊಸೈಟಿ) ಸಹಯೋಗದಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆ (ಸಿಬಿಎಸ್‌ಸಿ)ಯಲ್ಲಿ ಶನಿವಾರ ನಡೆದ ‘ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಇನ್‌ಸೆಫ್)’ದ ಪ್ರಾದೇಶಿಕ ಮೇಳ ಮತ್ತು ವಿಜ್ಞಾನ ವಿಸ್ತರಣಾ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡಿದರು. ಕುತೂಹಲ ಹಾಗೂ ಸೃಜನಶೀಲತೆಯು ವಿಜ್ಞಾನದ ಮಡಕೆಯಲ್ಲಿ ಇರುತ್ತವೆ. ಸಮುದಾಯದಲ್ಲಿ ಅವಶ್ಯಕತೆ ಇರುವ ಜನರಿಗೆ ಅದನ್ನು ಉಣಬಡಿಸಿದಾಗ ಸಾರ್ಥಕವಾಗುತ್ತದೆ ಎಂದರು. ಸಂಶೋಧನೆಗಳು ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸಬೇಕು. ವಿಜ್ಞಾನವು ಬದುಕಿನಲ್ಲಿ ಬದಲಾವಣೆತರಬೇಕು. ಪರಿವರ್ತನೆಗೆ ಕಾರಣವಾಗಬೇಕು. ನಿಮ್ಮೆಲ್ಲರಲ್ಲಿ ಅಂತಹ ಆತ್ಮವಿಶ್ವಾಸ ಇದೆ. ಅದು ಫಲಪ್ರದಗೊಳ್ಳಲಿ ಎಂದು ಹಾರೈಸಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಸ್ಪರ್ಧೆಯಲ್ಲಿ ಎಲ್ಲರೂ ಗೆದ್ದವರು. ಪ್ರಶಸ್ತಿ ಬಾರದೇ ಇದ್ದರೂ, ನಿಮ್ಮ ಸದುದ್ದೇಶ, ಪ್ರಯತ್ನ ಒಳಿತು ಮಾಡುತ್ತದೆ. ಸೋಲು ಜೀವನ ಕಲಿಸುತ್ತದೆ. ಬದುಕಿಗೆ ಬಲ ನೀಡುತ್ತದೆ. ಭವಿಷ್ಯ ಯಶಸ್ಸುಗೊಳಿಸುತ್ತದೆ ಎಂದರು. ನಮ್ಮ ಪರಿಸರದಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವಲ್ಲಿ ದಿವಂಗತ ಹರೀಶ್ ಭಟ್ ಅವರ ಕೊಡುಗೆಯನ್ನು ನಾನು ಸ್ಮರಿಸುತ್ತೇನೆ. ಯಾವತ್ತೂ ನಿಮ್ಮ ಆವಿಷ್ಕಾರಗಳು ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಬೇಕು. ಜನರಿಗೆ ಸ್ಪಂದಿಸಬೇಕು. ಪಿಎಚ್.ಡಿ, ಪೇಟೆಂಟ್ ಹಾಗೂ ಸಂಶೋಧನೆಗಳು ಕಪಾಟಿನಲ್ಲೇ ಕೊಳೆಯಬಾರದು ಎಂದರು. ನಿಮ್ಮ ಸೃಜನಶೀಲ ಯೋಚನೆಗಳು ಯೋಜನೆಗಳಾಗಬೇಕು. ನೀವು ಭವಿಷ್ಯದ ಉದ್ಯೋಗದಾತರಾಗಬೇಕೇ ಹೊರತು ಉದ್ಯೋಗ ಆಕಾಂಕ್ಷಿಗಳಲ್ಲ ಎಂದರು.

ಭಾರತೀಯ ವಿಜ್ಞಾನ ಸಮಾಜದ ನಾರಾಯಣ ಅಯ್ಯರ್ ಮಾತನಾಡಿ, ವೈಜ್ಞಾನಿಕ ಮನೋಭಾವ ಮೂಡಿಸುವ ನಮ್ಮ ಪ್ರಯತ್ನದ ಈ ಕಾರ್ಯಕ್ರಮ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ವಿವೇಕ್ ಆಳ್ವರಿಗೆ ಕರೆ ಮಾಡಿದಾಗ ಕ್ಷಣಾರ್ಧದಲ್ಲಿ ಆತಿಥ್ಯ ವಹಿಸಿಕೊಂಡರು. ಅವರದ್ದು ಕ್ರಿಯಾತ್ಮಕ ನಾಯಕತ್ವ. ಯಶಸ್ಸು ನಿಮ್ಮ ಮುಂದಿದೆ ಎಂದರು. ಚಿನ್ನದ ಪದಕ ಪಡೆದ ನಾಲ್ಕು ಹಾಗೂ ಬೆಳ್ಳಿ ಪಡೆದ ಒಂದು (ಅದ್ವಿಜ್ ಸಜೇಶ್) ಮಾದರಿಯು ರಾಜ್‌ಕೋಟ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ರಾಷ್ಟ್ರಮಟ್ಟದ ವಿಜೇತರು ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ತೆರಳಲಿದ್ದಾರೆ ಎಂದು ಘೋಷಿಸಿದರು. ಆಳ್ವಾಸ್ ಶಾಲೆಗಳ ಆಡಳಿತಾಧಿಕಾರಿ ಪ್ರೀತಮ್ ಕುಂದರ್, ಶಾಲೆಗಳ ಮುಖ್ಯ ಶಿಕ್ಷಕರುಗಳಾದ ಮೊಹಮ್ಮದ್ ಶಫಿ ಶೇಕ್, ಜಾನೆಟ್ ಪಾಯಸ್, ಶೈಲಜಾ ರಾವ್, ಉಮಾರಿ ಫಾಜ್, ವಿಜಯಾ ಇದ್ದರು. ತೀರ್ಪುಗಾರರಾದ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಪ್ರಾಧ್ಯಾಪಕರಾದ ಡಾ.ವಿನಯ್, ಡಾ.ಸಿದ್ದೇಶ್, ಡಾ.ವಿನುತಾ, ಡಾ.ಶಶಿಕುಮಾರ್, ಡಾ.ದತ್ತಾತ್ರೇಯ,
ಡಾ.ಉಮೇಶ್ಚಂದ್ರ ಹಾಗೂ ಆಳ್ವಾಸ್ ಪದವಿ ಕಾಲೇಜಿನ ಡಾ.ರಾಮ್ ಭಟ್ ಪಾಲ್ಗೊಂಡರು. ಮುಖ್ಯ ಶಿಕ್ಷಕಿ ಸರ್ವಾಣಿ ಡಿ. ಹೆಗ್ಡೆ ಹಾಗೂ ಸಹ ಶಿಕ್ಷಕಿ ಸಪ್ನಾ ಕಾರ್ಯಕ್ರಮ ನಿರೂಪಿಸಿದರು.

ವಿವಿಧ ಶಾಲೆಗಳಿಂದ ಬಂದಿದ್ದ ವಿಜ್ಞಾನ ಮಾದರಿಗಳ ಪೈಕಿ 35 ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದು, ಪ್ರದರ್ಶನ ಹಾಗೂ ಸ್ಪರ್ಧೆಯಲ್ಲಿ ಪಾಲ್ಗೊಂಡವು. ವಿದ್ಯಾರ್ಥಿಗಳ ಜೊತೆ ಮಾರ್ಗದರ್ಶಕ ಶಿಕ್ಷಕರು ಹಾಜರಿದ್ದರು.

ಪ್ರಶಸ್ತಿ: ಒಟ್ಟು ನಾಲ್ಕು ವಿಜ್ಞಾನ ಮಾದರಿಗಳಿಗೆ ಚಿನ್ನ, ಐದು ಮಾದರಿಗಳಿಗೆ ಬೆಳ್ಳಿ ಹಾಗೂ ಆರು ಮಾದರಿಗಳಿಗೆ ಕಂಚಿನ ಪದಕ ನೀಡಲಾಯಿತು. ಹತ್ತು ಮಾದರಿಗಳಿಗೆ ಪ್ರೋತ್ಸಾಹಕ ಹಾಗೂ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು. ಪುತ್ತೂರು ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯ ಧನ್ಯಶ್ರೀ, ಇದೇ ಶಾಲೆಯ ಆಪ್ತ ಚಂದ್ರಮತಿ ಮುಳಿಯ, ಮೂಡುಬಿದಿರೆ ಆಳ್ವಾಸ್ ಕೇಂದ್ರೀಯ ಶಾಲೆಯ ಅಮೋಘ ಎ. ಹೆಬ್ಬಾರ್, ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ಸುಹಾಸ್ ಎಂ. ಬಣಕಾರ್ ಹಾಗೂ ಹೃಷಿಕೇಶ್ ನಾಯಕ್ ಅವರ ವಿಜ್ಞಾನ ಮಾದರಿಗಳು ಚಿನ್ನದ ಪದಕ ಪಡೆದವು. ಪುತ್ತೂರು ಸುದಾನಾ ವಸತಿ ಶಾಲೆಯ ಅದ್ವಿಜ್ ಸಜೇಶ್, ಮೊಡಂಕಾಪು ಕಾರ್ಮೆಲ್ ಸಂಯುಕ್ತ ಪದವಿ ಪೂರ್ವಕಾಲೇಜಿನ ಅರೋನ್ ಡಿಸೋಜ,
ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ಆದ್ಯಾ ಪಿ. ಶೆಟ್ಟಿ, ಪುತ್ತೂರು ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯ ಅಭಿನವ್‌ಆಚಾರ್ ಕೆ. ಮತ್ತು ಶ್ರೀಜಿತ್ ಸಿ.ಎಚ್, ಪುತ್ತೂರು ಸುದಾನ ವಸತಿ ಶಾಲೆಯ ಸೃಷ್ಟಿ ಎನ್.ವಿ ಅವರ ಮಾದರಿಗಳು ಬೆಳ್ಳಿ ಪದಕಕ್ಕೆ ಪಾತ್ರವಾದವು. ಪುತ್ತೂರು ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯ ಆರ್ಯನ್ ಸಿ.ಆರ್. ಮತ್ತು ದಿಶಾಂತ್ ಕೆ., ಇದೇ ಶಾಲೆಯ ಗೌತಮ ಕೃಷ್ಣ, ಪುತ್ತೂರು ಸುದಾನ ವಸತಿ ಶಾಲೆಯ ಆದಿತ್ಯಾ ಕೆ., ಬಂಟ್ವಾಳ ಬಿಆರ್‌ಎಂಪಿಸಿ ಪಬ್ಲಿಕ್ ಸ್ಕೂಲ್ ಮತ್ತು ಕಾರ್ಮೆಲ್ ಹೈಸ್ಕೂಲ್‌ನ ರಿಶೋನ್ ಸಂಸಿಯಾ ಪಿಂಟೊ ಮತ್ತು ನಿಹಾರಿಕಾ, ಮಂಗಳೂರು ಶಕ್ತಿ ವಸತಿ ಶಾಲೆಯು ಶಾಸ್ತ ನಾಯ್ಕ್ ವಿ., ಪುತ್ತೂರು ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯ ಬಿ. ಧ್ಯಾನ್ ಶೆಟ್ಟಿ ಅವರ ಮಾದರಿಗಳು ಕಂಚಿನ ಪದಕಕ್ಕೆ ಪಾತ್ರವಾದವು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!