Thursday, September 19, 2024
Thursday, September 19, 2024

‘ನಮ್ಮ ಊರು ನಮ್ಮ ಹೆಮ್ಮೆ’ ವಿನೂತನ ಕಾರ್ಯಕ್ರಮ

‘ನಮ್ಮ ಊರು ನಮ್ಮ ಹೆಮ್ಮೆ’ ವಿನೂತನ ಕಾರ್ಯಕ್ರಮ

Date:

ಮಂಗಳೂರು, ಡಿ.2: ರಾಮಕೃಷ್ಣ ಮಿಷನ್ ಮಂಗಳೂರು ಇದರ ಪ್ರೇರಣೆಯಿಂದ ಶ್ರೀ ಅಂಬಾಮಹೇಶ್ವರಿ ಸೇವಾ ಟ್ರಸ್ಟ್, ಜೆಪ್ಪು ಹಾಗೂ ಮಂಗಳೂರು ಮಹಾನಗರ ಪಾಲಿಕೆ ಇದರ ಸಹಯೋಗದಲ್ಲಿ ‘ನಮ್ಮ ಊರು – ನಮ್ಮ ಹೆಮ್ಮೆ’ ಎಂಬ ಕಾರ್ಯಕ್ರಮಕ್ಕೆ ಮಂಗಳಾದೇವಿ ಪ್ರದೇಶದ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಸಿಬ್ಬಂದಿಗಳನ್ನು ಗೌರವಿಸುವ ಮೂಲಕ ಚಾಲನೆ ನೀಡಲಾಯಿತು. ಜಪ್ಪು ಪರಿಸರದ ಸುಮಾರು 800 ಮನೆಗಳಿಗೆ ಕರಪತ್ರ ಹಂಚುವ ಮೂಲಕ ‘ಸ್ವಚ್ಛತಾ ಜಾಗೃತಿ ಅಭಿಯಾನ’ ನಡೆಸಲಾಯಿತು. ನಂತರ ನಡೆದ ‘ಮಾದರಿ ವಾರ್ಡ್ ನತ್ತ – ಸಂಘಸಂಸ್ಥೆಗಳ ಚಿತ್ತ’ ಸಭಾ ಕಾರ್ಯಕ್ರಮದಲ್ಲಿ ಶ್ರೀ ಅಂಬಾಮಹೇಶ್ವರಿ ಸೇವಾ ಟ್ರಸ್ಟ್ ನಡೆದು ಬಂದ ದಾರಿ ಹಾಗೂ ತಮ್ಮ ವಾರ್ಡ್ ಗಳನ್ನು ಮಾದರಿ ವಾರ್ಡ್ ಗಳನ್ನಾಗಿ ಮಾಡಲು ಯೋಜಿಸಿದ ವಿವಿಧ ಚಟುವಟಿಕೆಗಳ ಬಗೆಗೆ ಸಾರ್ವಜನಿಕರಿಗೆ ವಿವರಿಸಲಾಯಿತು.

ಮಂಗಳೂರು ರಾಮಕೃಷ್ಣ ಮಿಷನ್ ನ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜಿ ರವರು ಮಾತನಾಡಿ, ಶ್ರೀ ಅಂಬಾಮಹೇಶ್ವರಿ ಸೇವಾ ಟ್ರಸ್ಟ್ ನ ವಿಶೇಷ ಯೋಜನೆಗೆ ಈ ಭಾಗದ ವಿವಿಧ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರು ಸಹಕರಿಸುವಂತೆ ಹಾಗೂ ನಗರ ಬೇರೆ ಬೇರೆ ಭಾಗಗಳಲ್ಲಿನ ಸಂಘಸಂಸ್ಥೆಗಳೂ ಸಹ ತಮ್ಮಇತರೆ ಸಾಮಾಜಿಕ ಕಾರ್ಯಗಳ ಜೊತೆ ನಗರದ ಜ್ವಲಂತ ಸಮಸ್ಯೆಗಳನ್ನು ಸುಧಾರಿಸುವ ಕಾರ್ಯಕ್ರಮಗಳನ್ನು ಮಾಡುವಂತೆ ಕರೆ ನೀಡಿದರು.

ಪಾಲಿಕೆಯ ಮಹಾಪೌರರಾದ ಸುಧೀರ್ ಶೆಟ್ಟಿ ಕಣ್ಣೂರು ರವರಿಗೆ ಸ್ವಚ್ಛತಾ ಜಾಗೃತಿ ಅಭಿಯಾನದ ಪ್ರಾಯೋಗಿಕ ವರದಿಯನ್ನು ಹಸ್ತಾಂತರಿಸಲಾಯಿತು. ಶಾಸಕ ಡಿ.ವೇದವ್ಯಾಸ್ ಕಾಮತ್ ಮಾತನಾಡಿ, ಸೇವಾ ಟ್ರಸ್ಟ್ ನ ಮಾದರಿ ವಾರ್ಡ್ ಯೋಜನೆಗೆ ನಗರ ಪಾಲಿಕೆಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆಯಿತ್ತರು. ಪಾಲಿಕೆ ಸದಸ್ಯರುಗಳಾದ ಪ್ರೇಮಾನಂದ ಶೆಟ್ಟಿ, ರೇವತಿ ಶ್ಯಾಮ್ ಸುಂದರ್, ಭಾನುಮತಿ, ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಸೀತಾರಾಮ್ ಎ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!