Wednesday, February 26, 2025
Wednesday, February 26, 2025

ಸಮಾಜಕ್ಕೆ ಉತ್ತಮ ಸಂದೇಶ ನೀಡುವ: ಡಾ.ಎಂ. ಮೋಹನ ಆಳ್ವ

ಸಮಾಜಕ್ಕೆ ಉತ್ತಮ ಸಂದೇಶ ನೀಡುವ: ಡಾ.ಎಂ. ಮೋಹನ ಆಳ್ವ

Date:

ವಿದ್ಯಾಗಿರಿ (ಮೂಡುಬಿದಿರೆ), ಡಿ.13: ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಸಂದೇಶವನ್ನು ವಿರಾಸತ್ ಹೊಂದಿದೆ. ಸತ್ಯವನ್ನೇ ಬರೆಯುವ ಧ್ಯೇಯವನ್ನು ಮಾಧ್ಯಮ ಹೊಂದಿದೆ. ಜೊತೆಯಾಗಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಡಿ.14ರಿಂದ 17ರ ವರೆಗೆ ನಡೆಯುವ ‘ಆಳ್ವಾಸ್ ವಿರಾಸತ್ -23’ರ ಮಾಧ್ಯಮ ಕೇಂದ್ರವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಣ್ಣ ಮಟ್ಟದಿಂದ ಆರಂಭಗೊಂಡ ವಿರಾಸತ್ ಇಂದು ಜಾಗತಿಕ ಚಿಂತನೆ ಮೂಲಕ ಲಕ್ಷಾಂತರ ಜನರ ಪಾಲ್ಗೊಳ್ಳುವಿಕೆಯ ಕೇಂದ್ರವಾಗಿದೆ. ಇದಕ್ಕೆ ಮಾಧ್ಯಮವೂ ಉತ್ತಮ ಸ್ಪಂದನೆ ನೀಡುತ್ತಿದೆ ಎಂದರು. ವನ್ಯಜೀವ ಛಾಯಾಗ್ರಾಹಕರಾದ ನಿವೃತ್ತ ಐಎಫ್‌ಎಸ್ ಅಧಿಕಾರಿ ಎಂ.ಎನ್. ಜಯಕುಮಾರ್ ಮಾತನಾಡಿ, ಮಾಧ್ಯಮಗಳ ಮೂಲಕ ಜನರಿಗೆ ಒಳ್ಳೆಯ ಸಂದೇಶ ತಲುಪಲಿ ಎಂದರು. ಪ್ರತಿಭೆಗಳಿಗೆ ಸಾಂಸ್ಕೃತಿಕ ವೇದಿಕೆಗಳು ಅವಶ್ಯ. ಎಲ್ಲಾ ಪ್ರತಿಭೆಗಳಿಗೂ ಇಲ್ಲಿ ಅವಕಾಶವನ್ನು ಕೊಡಲಾಗುತ್ತದೆ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ನಮ್ಮ ಸಂಸ್ಕೃತಿಯನ್ನು ದೇಶ ಮಾತ್ರವಲ್ಲದೆ ಹೊರ ದೇಶದವರೆಗೂ ತಲುಪಿಸುವ ಕಾರ್ಯ ನಡೆಯುತ್ತಿದೆ. ಪತ್ರಕರ್ತರು ಕೇವಲ ವರದಿ ಮಾತ್ರವಲ್ಲದೆ, ಈ ವಿರಾಸತ್ ಉತ್ಸವವನ್ನ ಆಸ್ವಾದಿಸಬೇಕು ಎಂದರು. ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಭಾಸ್ಕರ ರೈ, ಖಜಾಂಚಿ ಪುಷ್ಪರಾಜ್, ಹಾಗೂ ಜಿಲ್ಲಾ ಕಾರ‍್ಯಕಾರಿ ಸಮಿತಿ ಸದಸ್ಯರು, ಮೂಡುಬಿದಿರೆ ತಾಲ್ಲೂಕು ಘಟಕದ ಅಧ್ಯಕ್ಷ ಯಶೋಧರ, ಕಾರ‍್ಯದರ್ಶಿ ಪ್ರೇಮಾಶ್ರೀ ಕಲ್ಲಬೆಟ್ಟು, ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ ಇದ್ದರು. ವಿದ್ಯಾರ್ಥಿ ಅವಿನಾಶ್ ಕಟೀಲ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!