Sunday, September 8, 2024
Sunday, September 8, 2024

ರಾಜ್ಯದಲ್ಲಿ ರಜೆ ಘೋಷಿಸದೇ ಹಿಂದೂಗಳ ಧಾರ್ಮಿಕ ಭಾವನೆ ಕಡೆಗಣಿಸಲಾಗಿದೆ: ಶಾಸಕ ವೇದವ್ಯಾಸ್ ಕಾಮತ್

ರಾಜ್ಯದಲ್ಲಿ ರಜೆ ಘೋಷಿಸದೇ ಹಿಂದೂಗಳ ಧಾರ್ಮಿಕ ಭಾವನೆ ಕಡೆಗಣಿಸಲಾಗಿದೆ: ಶಾಸಕ ವೇದವ್ಯಾಸ್ ಕಾಮತ್

Date:

ಮಂಗಳೂರು, ಜ.21: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ರಾಮ ಪ್ರಾಣಪ್ರತಿಷ್ಠೆ ಮಹೋತ್ಸವದ ನಡೆಯಲಿದ್ದು ಇಡೀ ದೇಶದ ತುಂಬೆಲ್ಲ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ಹಿಂದೂಗಳು ಕುಟುಂಬ ಸಮೇತ ತಮ್ಮ ತಮ್ಮ ಮನೆಗಳಲ್ಲಿ, ದೇವಸ್ಥಾನಗಳಲ್ಲಿ, ಧಾರ್ಮಿಕ ಪೂಜಾ ವಿಧಿವಿಧಾನಗಳ ಮೂಲಕ ಈ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಕರೆ ನೀಡಿದರು.

ಇದು ಭಾರತದ ಮುಂದಿನ ಅನೇಕಾರು ತಲೆಮಾರುಗಳು, ಹಲವಾರು ಶತಮಾನಗಳ ಕಾಲ ನೆನಪಿಟ್ಟುಕೊಳ್ಳುವಂತಹ ದಿನವಾಗಿದ್ದು, ಕೋಟ್ಯಂತರ ಹಿಂದೂಗಳ ಪ್ರಾರ್ಥನೆ, ಲಕ್ಷಾಂತರ ಕರಸೇವಕರ ತ್ಯಾಗ, ಸಾವಿರಾರು ರಾಮಭಕ್ತರ ಬಲಿದಾನದ ಫಲವಾಗಿ ಸನಾತನ ಧರ್ಮದ ಭಗವಾಧ್ವಜ ಬಾನೆತ್ತರದಲ್ಲಿ ರಾರಾಜಿಸುತ್ತಿದೆ. ಈ ಶುಭ ಸಂದರ್ಭಕ್ಕೆ ಕಾರಣೀಭೂತರಾದ ಪ್ರತಿಯೊಬ್ಬ ರಾಮಭಕ್ತರನ್ನೂ ಇಂದಿನ ಪೂಜೆಯ ಸಂದರ್ಭದಲ್ಲಿ ಸ್ಮರಿಸುವ ಮೂಲಕ ಗೌರವ ಸಲ್ಲಿಸುವಂತೆ ಮನವಿ ಮಾಡಿದರು.

ಈ ಅಪೂರ್ವ ಐತಿಹಾಸಿಕ ಕ್ಷಣಕ್ಕೆ ಪ್ರತಿಯೊಬ್ಬ ದೇಶವಾಸಿಯೂ ಸಾಕ್ಷಿಯಾಗಲು ಕೇಂದ್ರ ಸರ್ಕಾರ ಸಹಿತ ದೇಶದ ಬಹುತೇಕ ರಾಜ್ಯಗಳು ಸಾರ್ವಜನಿಕ ರಜೆಯನ್ನು ಘೋಷಿಸಿದ್ದು ರಾಜ್ಯ ಕಾಂಗ್ರೆಸ್ ಸರಕಾರ ಮಾತ್ರ ತನ್ನ ಎಂದಿನ ಹಿಂದೂ ವಿರೋಧಿ ನೀತಿ ಪ್ರದರ್ಶಿಸಿ ರಜೆ ಘೋಷಿಸದೇ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳನ್ನು ಕಡೆಗಣಿಸಿದೆ. ಆದರೂ ಸಹ ಹಲವು ಶತಮಾನಗಳ ಕನಸು ಸಾಕಾರಗೊಳ್ಳುವ ಈ ಐತಿಹಾಸಿಕ ದಿನದಂದು ಸಮಸ್ತ ರಾಮಭಕ್ತರು ಕುಟುಂಬ ಸಮೇತ ಪಾಲ್ಗೊಂಡು ಸಂಭ್ರಮಿಸುವಂತೆ ಶಾಸಕರು ಮನವಿ ಮಾಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೇಶಕ್ಕೆ ಶಿಕ್ಷಕರ ಸೇವೆ ಮಹತ್ವದ್ದು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಸೆ.7: ಶಿಕ್ಷಕರು ರಾಷ್ಟ್ರಕ್ಕೆ ಅತ್ಯಂತ ಮಹತ್ವದ ಸೇವೆ ಸಲ್ಲಿಸುತ್ತಿದ್ದು, ಇಂದಿನ...

ಸುಳ್ಳು ದಾಖಲೆ ಸೃಷ್ಟಿ: ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್ ಸೇವೆಯಿಂದ ಬಿಡುಗಡೆ

ನವದೆಹಲಿ, ಸೆ.7: 2023 ರ ಬ್ಯಾಚ್ ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್...

18ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ

ಬೆಳ್ಮಣ್, ಸೆ.7: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಮದ್ಯ ಮಾರಾಟ ನಿಷೇಧ

ಉಡುಪಿ, ಸೆ.6: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ...
error: Content is protected !!