Wednesday, February 26, 2025
Wednesday, February 26, 2025

ಪೌರ ಕಾರ್ಮಿಕರ ವಿಶ್ರಾಂತಿ ಕೊಠಡಿಗೆ ಶಿಲಾನ್ಯಾಸ

ಪೌರ ಕಾರ್ಮಿಕರ ವಿಶ್ರಾಂತಿ ಕೊಠಡಿಗೆ ಶಿಲಾನ್ಯಾಸ

Date:

ಮಂಗಳೂರು, ಜ. 25: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 42ನೇ ಡೊಂಗರಕೇರಿ ವಾರ್ಡಿನ ಅಳಕೆ ವೆಟ್ ವೆಲ್ ಬಳಿ ಗೈಲ್ ಗ್ಯಾಸ್ ರವರ ಸಿ.ಎಸ್.ಆರ್ ಅನುದಾನದಡಿ 23 ಲಕ್ಷ ವೆಚ್ಚದಲ್ಲಿ ಪೌರ ಕಾರ್ಮಿಕರಿಗಾಗಿ ವಿಶ್ರಾಂತಿ ಕೊಠಡಿ ಮತ್ತು ಶೌಚಾಲಯದ ಕಟ್ಟಡ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಸೇರಿದಂತೆ ಪ್ರತೀ ನಗರಗಳ ನೈರ್ಮಲ್ಯ ಹಾಗೂ ಸುಂದರ ಪರಿಸರಕ್ಕೆ ಪೌರಕಾರ್ಮಿಕರ ಕೊಡುಗೆ ಬಹಳಷ್ಟಿದೆ. ಅಂತಹ ಕಾರ್ಮಿಕರಿಗೆ ನಿರಂತರ ಕಾರ್ಯದೊತ್ತಡದ ನಡುವೆ ಒಂದಷ್ಟು ವಿಶ್ರಾಂತಿಯ ಅಗತ್ಯವಿದೆ. ಇದನ್ನು ಮನಗಂಡು ಪ್ರಸ್ತುತ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಗೈಲ್ ಗ್ಯಾಸ್ ರವರಿಂದ ಸಿ.ಎಸ್.ಆರ್ ಅನುದಾನದಡಿಯಲ್ಲಿ ಈ ವಿಶೇಷ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಇಂತಹದೇ ಇನ್ನೂ ಮೂರ್ನಾಲ್ಕು ಯೋಜನೆಗಳು ಜಾರಿಯಾಗಲಿವೆ. ಅವೆಲ್ಲವೂ ಶೀಘ್ರದಲ್ಲಿ ಪೌರಕಾರ್ಮಿಕರ ಉಪಯೋಗಕ್ಕೆ ಸಿಗುವಂತಾಗಲಿ ಎಂದರು.

ಉಪಮೇಯರ್ ಸುನಿತಾ, ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯೆ ಜಯಶ್ರೀ ಕುಡ್ವ, ಪೂರ್ಣಿಮಾ, ರಾಜೇಂದ್ರ ಕುಮಾರ್, ರಮೇಶ್ ಹೆಗ್ಡೆ, ಗೈಲ್ ಗ್ಯಾಸ್ ಹಾಗೂ ಪಾಲಿಕೆ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!