Home ಸುದ್ಧಿಗಳು ಪ್ರಾದೇಶಿಕ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪದಗ್ರಹಣ ಕಾರ್ಯಕ್ರಮ

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪದಗ್ರಹಣ ಕಾರ್ಯಕ್ರಮ

163
0

ಮುಡಿಪು, ಮಾ.17: ಮಂಗಳೂರು ಮಂಡಲದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ಮುಡಿಪು ಕಂಬ್ಲಪದವಿನ ಪಕ್ಷದ ಕಚೇರಿಯಲ್ಲಿ ನಡೆಯಿತು. ಮಂಡಲದ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೈತ್ತಬೈಲ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ನೂತನವಾಗಿ ಮಂಡಲದ ಅಲ್ಪಸಂಖ್ಯಾತ ಮೋರ್ಚಾ ಆಯ್ಕೆಯಾದವರನ್ನು, ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾದ ಸಿದ್ದೀಕ್ ತಲಪಾಡಿ ಹಾಗೂ ಕಾರ್ಯಕರ್ತರನ್ನು ಮಂಡಲದ ಅಧ್ಯಕ್ಷರು ಪಕ್ಷಕ್ಕೆ ಸೇರ್ಪಡೆ ಮಾಡಿದರು.

ಅಲ್ಪಸಂಖ್ಯಾತ ಮೋರ್ಚಾ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕರೀಂ ಉಚ್ಚಿಲ ರವರಿಗೆ ಪಕ್ಷದ ಧ್ವಜವನ್ನು ನೀಡಲಾಯಿತು. ಜಿಲ್ಲಾ ಕಾರ್ಯದರ್ಶಿ ಮಂಡಲದ ಪ್ರಭಾರಿಯಾದ ದಿನೇಶ್ ಅಮ್ಟೂರು, ಜಿಲ್ಲಾ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ವಿಷಯಾಧಾರಿತವಾಗಿ ಮಾತನಾಡಿದರು. ವೇದಿಕೆಯಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೋಟ್ಟು, ಸುಜೀತ್ ಮಾಡುರ್, ಮಂಡಲದ ಉಪಾಧ್ಯಕ್ಷರಾದ ಹೇಮಂತ್ ಶೆಟ್ಟಿ, ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸಿರಾಜುದ್ದೀನ್, ಅಶ್ರಫ್ ಹರೇಕಳ, ಆಸ್ಗರ್ ಮುಡಿಪು, ಮಂಡಲದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅಶ್ರಫ್ ಮಾರಿಪಲ್ಲ, ಇರ್ಷಾದ್ ಡಿಜಿ ಕಟ್ಟೆ, ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.