Thursday, July 30, 2026
Thursday, July 30, 2026

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

Date:

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ ಬಹುಸಂಸ್ಕೃತಿ ಉತ್ಸವದ ಅಂಗವಾಗಿ ಮಂಗಳೂರು ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ.ಸತೀಶ ಪೈ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಹಾಗೂ ಲಲಿತಕಲಾ ಸಂಘದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ನಾಡು,ನುಡಿ, ಸಂಸ್ಕೃತಿಗೆ ಸಂಬಂಧಿಸಿದ ಭಾವಗೀತೆಗಳ ಸಮೂಹಗಾನ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಜಿಲ್ಲೆಯ 16 ಕಾಲೇಜಿನ ತಂಡಗಳು ಭಾಗವಹಿಸಿದ್ದವು. ಕಾಲೇಜು ಶಿಕ್ಷಣ ಇಲಾಖೆ, ಮಂಗಳೂರು ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕರಾದ ಪ್ರೊ. ರಾಮೇಗೌಡ ಎಂ ಇವರು ಸ್ಪರ್ಧೆಯನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ ಅವರು ವಹಿಸಿದ್ದರು. ಐಕ್ಯೂಎಸಿ ಸಂಯೋಜಕರಾದ ದೇವಿ ಪ್ರಸಾದ್ ಹಾಗೂ ಲಲಿತಕಲಾ ಸಂಘದ ಹಾಗೂ ಸ್ಪರ್ಧೆಗಳ ಸಂಯೋಜಕರಾದ ಡಾ. ಕೃಷ್ಣಪ್ರಭ ಉಪಸ್ಥಿತರಿದ್ದರು. ಐಕ್ಯೂಎಸಿ ಸಹ ಸಂಯೋಜಕರಾದ ಡಾ. ಜ್ಯೋತಿಪ್ರಿಯ ಕಾರ್ಯಕ್ರಮ ನಿರ್ವಹಿಸಿದರು. ಜಯಲಕ್ಷ್ಮಿ ಹಾಗೂ ಸಂಧ್ಯಾರಾಣಿ ತೀರ್ಪುಗಾರರಾಗಿ ಸಹಕರಿಸಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಪುತ್ತೂರು, ಬೆಸಂಟ್ ಮಹಿಳಾ ಕಾಲೇಜು, ಕೊಡಿಯಾಲ್ ಬೈಲ್, ಮಂಗಳೂರು ಹಾಗೂ ಕೆನರಾ ಕಾಲೇಜು ಮಂಗಳೂರು ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದುಕೊಂಡವು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!