Wednesday, February 26, 2025
Wednesday, February 26, 2025

ತುಳು ಕಾದಂಬರಿ ಗತಿ ಬದಲಾಯಿಸಿದ ‘ನಾಣಜ್ಜೆರ್’

ತುಳು ಕಾದಂಬರಿ ಗತಿ ಬದಲಾಯಿಸಿದ ‘ನಾಣಜ್ಜೆರ್’

Date:

ಮೂಡುಬಿದಿರೆ, ನ.27: ತುಳು ಕಾದಂಬರಿ ಪ್ರಕಾರದ ದಿಕ್ಕನ್ನೇ ಬದಲಾಯಿಸಿದ ಕೃತಿ ‘ನಾಣಜ್ಜೆರ್ ಸುದೆ ತಿರ್ಗಾಯೆರ್ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುಲಸಚಿವ (ಶೈಕ್ಷಣಿಕ) ಡಾ. ಟಿ. ಕೆ. ರವೀಂದ್ರನ್ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಸಭಾಂಗಣದಲ್ಲಿ ಬುಧವಾರ ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ವತಿಯಿಂದ ನಡೆದ ‘ಡಾ. ಮಹಾಲಿಂಗ ಭಟ್ ಬರೆದ ನಾಣಜ್ಜೆರ್ ಸುದೆ ತಿರ್ಗಾಯೆರ್’ ಕಾದಂಬರಿಯ ಅವಲೋಕನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತುಳು ಭಾಷೆಯು ತಮಿಳಿನಷ್ಟೇ ಪುರಾತನವಾದ ಭಾಷೆ. ಪ್ರಪಂಚದಾದ್ಯಂತ ಒಂದು ಕೋಟಿಗೂ ಹೆಚ್ಚು ತುಳು ಭಾಷಿಕರಿದ್ದಾರೆ. ಸಂಗಮ ಸಾಹಿತ್ಯದಲ್ಲೂ ತುಳು ಭಾಷೆಯ ಉಲ್ಲೇಖವಿದೆ ಎಂದರು.

ತಮ್ಮ ಭಾಷೆಯ ಮೇಲೆ ಯಾರಿಗೂ ಕೀಳರಿಮೆ ಇರಬಾರದು. ತುಳು ಭಾಷಿಕರು ಸಾಹಿತ್ಯಕ್ಕೆ ಹೆಚ್ಚಿನ ಒಲವು ನೀಡದೇ ಇರುವುದರಿಂದ ಸಾಹಿತ್ಯದಲ್ಲಿ ತುಳು ಭಾಷೆಯು ಹಿಂದುಳಿದಿದೆ. ತುಳು ಭಾಷಿಕರು ತುಳು ಭಾಷೆಯನ್ನು ಉತ್ತೇಜಿಸಬೇಕು ಎಂದು ತಿಳಿಸಿದರು. ‘ನಾಣಜ್ಜೆರ್ ಸುದೆ ತಿರ್ಗಾಯೆರ್’ ಕೃತಿಯು ತುಳು ಸಾಹಿತ್ಯದ ಸ್ಥಿತಿಯನ್ನೇ ಬದಲಾಯಿಸಿದ ಕೃತಿಯಾಗಿದೆ. ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕೃತಿ ಇದಾಗಿದ್ದು. ತುಳು ಸಾಹಿತ್ಯವು ಈ ಕೃತಿಯ ನಂತರ ತಿರುವು ಪಡೆದುಕೊಂಡಿದೆ ಎಂದರು. ವಾಣಿಜ್ಯ ವೃತ್ತಿಪರ ವಿಭಾಗದ ಸಂಯೋಜಕ ಅಶೋಕ್ ಕೆ. ಜಿ. ಇದ್ದರು. ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಯೋಗೀಶ್ ಕೈರೋಡಿ ಸ್ವಾಗತಿಸಿ, ವಿದ್ಯಾರ್ಥಿನಿ ಅನೀಶಾ ಶೆಟ್ಟಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!