Monday, July 27, 2026
Monday, July 27, 2026

ವಿಟ್ಲ: ತುಳು ಲಿಪಿ ಶಾಸನ ಪತ್ತೆ

ವಿಟ್ಲ: ತುಳು ಲಿಪಿ ಶಾಸನ ಪತ್ತೆ

Date:

ವಿಟ್ಲ, ಮಾ.2: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕಸಬ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀ ಗಣಪತಿ ಲಕ್ಷ್ಮೀ ನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೋದ್ಧಾರ ಸಂದರ್ಭದಲ್ಲಿ ಎರಡು ಶಿಲಾ ಫಲಕದಲ್ಲಿ ಶಾಸನಗಳು ದೊರೆತಿದ್ದು, ಇದರ ಪ್ರಾಥಮಿಕ ಮಾಹಿತಿಯನ್ನು ಡಾ. ವೆಂಕಟೇಶ ಮಂಜುಳಗಿರಿ ಅವರಿಂದ ಪಡೆದುಕೊಂಡು ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಸಂಶೋಧನ ಕೇಂದ್ರ- ಕುಕ್ಕೆ ಸುಬ್ರಹ್ಮಣ್ಯ ಇದರ ನಿರ್ದೇಶಕರಾದ ಡಾ. ಜಿ.ವಿ ಕಲ್ಲಾಪುರ ಅವರು ಶಾಸನದ ಅಧ್ಯಯನವನ್ನು ಮಾಡಿರುತ್ತಾರೆ.

ಶಾಸನವನ್ನು ಎರಡು ಕಣ ಶಿಲೆಯಲ್ಲಿ (ಗ್ರಾನೈಟ್) ಕೊರೆಯಲಾಗಿದ್ದು, ತುಳು ಲಿಪಿ ಮತ್ತು ಕನ್ನಡ ಭಾಷೆಯಲ್ಲಿದೆ. ಶಾಸನದ ಒಂದು ಫಲಕದಲ್ಲಿ 11 ಸಾಲುಗಳು ಮತ್ತು ಇನ್ನೊಂದು ಫಲಕದಲ್ಲಿ 4 ಸಾಲುಗಳಿವೆ. ಸ್ವಸ್ತಿಶ್ರೀ ಎಂಬ ಶುಭ ಸೂಕ್ತದಿಂದ ಪ್ರಾರಂಭವಾಗುವ ಈ ಶಾಸನವನ್ನು ಶಾಲಿವಾಹನ ಶಕವರ್ಷ 1801ರ (ಸಾಮಾನ್ಯ ವರ್ಷ 1879) ಪ್ರಮಾಧಿ ಸಂವತ್ಸರದ ಉತ್ತರಾಯಣದ ಬಹುಳ ಬುಧವಾರದ ಕುಂಭ ಲಗ್ನದಲ್ಲಿ ಹಾಕಲ್ಪಟ್ಟಿದೆ. ಈ ಸಂದರ್ಭದಲ್ಲಿ ವಿಟ್ಲದ ಬಕ್ರಬೈಲಿನ ನೆತ್ರಕೆರೆಯ ಮಠದಲ್ಲಿ ಶ್ರೀ ಗಣಪತಿ ಲಕ್ಷ್ಮೀ ನಾರಾಯಣ ದೇವರನ್ನು ಪ್ರತಿಷ್ಠಾಪಿಸಿರುವುದು ಹಾಗೆಯೇ ಪ್ರತಿಷ್ಠಿತ ದೇವರ ನಿತ್ಯ ಸೇವೆಯ ವಿನಿಯೋಗಕ್ಕಾಗಿ ನಗದು ಸಹಿತ ದಾನವನ್ನು ಕುಕ್ಕಿಲದ ಪುಟ್ಟಣ ಭಟ್ಟರ ಮಗ ಈಶ್ವರ ಭಟ್ಟರು ನೀಡಿರುವುದು ತಿಳಿದುಬರುತ್ತದೆ.

ಕ್ಷೇತ್ರಕಾರ್ಯ ಶೋಧನೆಯಲ್ಲಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ, ಉಪನಿರ್ದೇಶಕರು – ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಸಂಶೋಧನ ಕೇಂದ್ರ-ಸುಬ್ರಹ್ಮಣ್ಯ, ಮಂಜುನಾಥ ನಂದಳಿಕೆ (ಇತಿಹಾಸ ಮತ್ತು ಪುರಾತತ್ತ್ವ ಸಂಶೋಧನಾರ್ಥಿ) ಹಾಗೂ ದೇವಾಲಯದ ಆಡಳಿತ ಮಂಡಳಿಯವರಾದ ಎನ್. ಶಂಕರನಾರಾಯಣ ಭಟ್ಟ, ಡಾ. ಎನ್. ತಿರುಮಲೇಶ್ವರ ಭಟ್ಟ, ಎನ್. ರವೀಶ, ಎನ್. ಮಹೇಶ, ಗಣೇಶ ಭಟ್, ಸುರೇಶ್ ಎನ್., ಶರ್ಮಿಳಾ, ಯು. ನಾರಾಯಣ ಭಟ್, ಮಂಜುಳಗಿರಿ ಈಶ್ವರ ಭಟ್ ಸಹಕಾರ ನೀಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಟ ಶರಣ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು, ಜು.27: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಶರಣ್ ಅವರು...

ಪಲಿಮಾರು: ಗ್ರಾಮಸ್ಥರ ಅಹವಾಲು ಸ್ವೀಕಾರ; ವಿವಿಧ ಸವಲತ್ತು ವಿತರಣೆ

ಶಿರ್ವ, ಜು.27: ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಉಡುಪಿ ಆರ್.ಟಿ. ಓ. ಕಚೇರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಮಣಿಪಾಲ, ಜು.27: ಉಡುಪಿ ಆರ್. ಟಿ. ಓ. ಕಚೇರಿಯಲ್ಲಿ ಪ್ರಮುಖ ಹುದ್ದೆಗಳು...
error: Content is protected !!