Monday, February 24, 2025
Monday, February 24, 2025

ಭಿಕ್ಷಾಟನೆ ನಡೆಸುತ್ತಿದ್ದ ಮಹಿಳೆಯ ಜೊತೆಗೆ 1 ವರ್ಷ ಪ್ರಾಯದ ಹೆಣ್ಣು ಮಗುವನ್ನು ರಕ್ಷಿಸಿದ ಮಂಗಳೂರು ಚೈಲ್ಡ್ ಲೈನ್

ಭಿಕ್ಷಾಟನೆ ನಡೆಸುತ್ತಿದ್ದ ಮಹಿಳೆಯ ಜೊತೆಗೆ 1 ವರ್ಷ ಪ್ರಾಯದ ಹೆಣ್ಣು ಮಗುವನ್ನು ರಕ್ಷಿಸಿದ ಮಂಗಳೂರು ಚೈಲ್ಡ್ ಲೈನ್

Date:

ಮಂಗಳೂರು: ಮಂಗಳೂರಿನ ನಂತೂರು ಸರ್ಕಲ್ ಬಳಿ ಅಪ್ರಾಪ್ತ ವಯಸ್ಸಿನ ಮಕ್ಕಳು ಭಿಕ್ಷಾಟನೆ ನಡೆಸುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ ಎಂಬುದಾಗಿ ಸಾರ್ವಜನಿಕರಿಂದ ಚೈಲ್ಡ್ ಲೈನ್ -1098 ಕ್ಕೆ ಮಾಹಿತಿ ಬಂದಿರುವ ಹಿನ್ನಲೆಯಲ್ಲಿ, ಚೈಲ್ಡ್ ಲೈನ್ ತಂಡವು ನಂತೂರಿನ ಸ್ಥಳಕ್ಕೆ ತೆರಳಿ ಭಿಕ್ಷಾಟನೆಯಲ್ಲಿ ತೊಡಗಿಕೊಂಡಿದ್ದ ಬೆಂಗಳೂರಿನ ತಾವರೆಕೆರೆಯ ಮಹಿಳೆ ಹಾಗೂ ಆಕೆಯ ಬಳಿಯಿದ್ದ 1 ವರ್ಷದ ಪ್ರಾಯದ ಹೆಣ್ಣುಮಗುವನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಮಹಿಳಾ ಘಟಕದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ.

ಈ ಸಂದರ್ಭದಲ್ಲಿ ಚೈಲ್ಡ್ ಲೈನ್ ನ ಕೇಂದ್ರ ಸಂಯೋಜಕರಾದ ದೀಕ್ಷಿತ್ ಅಚ್ರಪ್ಪಾಡಿ, ಸಿಬ್ಬಂದಿಗಳಾದ ಆಶಾಲತ ಕುಂಪಲ, ಹಾಗೂ ಜಯಂತಿ ಸ್ವಯಂ ಸೇವಕರಾದ ಕವನ್ ಕಬಕ ಜೊತೆಗಿದ್ದರು.

ನಗರದ ನಂತೂರನ್ನೇ ಕೇಂದ್ರವನ್ನಾಗಿಸಿ ವಲಸೆ ಕುಟುಂಬಗಳು ಮಕ್ಕಳನ್ನು ಭಿಕ್ಷಾಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರದೇ ಮಗುವೆನ್ನುವುದಕ್ಕೆ ಸ್ಪಷ್ಟ ದಾಖಲೆಗಳು ಇವರುಗಳ ಬಳಿ ಇಲ್ಲದಿರುವುದು ಕಂಡುಬಂದಿದೆ. ಆದ್ದರಿಂದ ಭಿಕ್ಷಾಟನೆ ನಿರತ ಮಕ್ಕಳು ನಗರದಲ್ಲಿ ಕಂಡುಬಂದಲ್ಲಿ ದಯವಿಟ್ಟು ಹಣದ ರೂಪದಲ್ಲಿ ಭಿಕ್ಷೆ ನೀಡಬೇಡಿ, ಕೂಡಲೇ ಚೈಲ್ಡ್ ಲೈನ್ -1098 ಕ್ಕೆ ಕರೆಮಾಡಿ ಮಾಹಿತಿ ನೀಡಲು ಕೋರಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!