Tuesday, September 8, 2026
Tuesday, September 8, 2026

ಯಕ್ಷಗಾನ ಕಲಾವಿದರ ಬಗ್ಗೆ ಪುರುಷೋತ್ತಮ ಬಿಳಿಮಲೆ ಹೇಳಿಕೆ ಸಹಿಸಲು ಸಾಧ್ಯವಿಲ್ಲ: ವೇದವ್ಯಾಸ ಕಾಮತ್ ಆಕ್ರೋಶ

ಯಕ್ಷಗಾನ ಕಲಾವಿದರ ಬಗ್ಗೆ ಪುರುಷೋತ್ತಮ ಬಿಳಿಮಲೆ ಹೇಳಿಕೆ ಸಹಿಸಲು ಸಾಧ್ಯವಿಲ್ಲ: ವೇದವ್ಯಾಸ ಕಾಮತ್ ಆಕ್ರೋಶ

Date:

ಮಂಗಳೂರು, ನ.19: ಯಕ್ಷಗಾನ ಕಲಾವಿದರ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರ ಹೇಳಿಕೆ ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಯಕ್ಷಗಾನವು ಕರಾವಳಿ ಕರ್ನಾಟಕದ ಗಂಡು ಕಲೆಯಾಗಿದ್ದು, ಅದು ಭಕ್ತಿ ಭಾವದಿಂದ ಕೂಡಿದ ನಮ್ಮ ಸಂಸ್ಕೃತಿಯ ಭಾಗವಾಗಿದೆ. ಯಕ್ಷಗಾನ ಕಲಾವಿದರು ಸಮಾಜಕ್ಕೆ ನೀಡಿದ ಕೊಡುಗೆಗಾಗಿಯೇ ಅವರನ್ನು ಗೌರವಯುತವಾಗಿ ಕಾಣುವ ಸಮಾಜ ನಮ್ಮದು. ಹಿಂದೂ ಪರಂಪರೆಯನ್ನು ಸದಾ ಅವಹೇಳನ ಮಾಡುವುದನ್ನೇ ಪರಮ ಗುರಿಯಾಗಿಸಿಕೊಂಡಿರುವ ಎಡಪಂಥೀಯ ಬುದ್ದಿಜೀವಿಗಳು ನೀಡಿರುವ ಹೇಳಿಕೆ ಯಕ್ಷಗಾನ ಕಲಾವಿದರಿಗೆ ಮಾತ್ರವಲ್ಲ, ಇಡೀ ಹಿಂದೂ ಸಮಾಜಕ್ಕಾದ ಅವಮಾನವಾಗಿದೆ ಎಂದು ವೇದವ್ಯಾಸ ಕಾಮತ್ ಆಕ್ರೋಷ ವ್ಯಕ್ತಪಡಿಸಿದ್ದಾರೆ. ಕರಾವಳಿಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಅವಮಾನಿಸಿದ ವ್ಯಕ್ತಿಯನ್ನು ಈ ಕೂಡಲೇ ಆ ಸ್ಥಾನದಿಂದ ಕೈಬಿಡಬೇಕು ಎಂದು ಶಾಸಕ ಕಾಮತ್ ಆಗ್ರಹಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!