ಮಂಗಳೂರು, ನ.19: ಯಕ್ಷಗಾನ ಕಲಾವಿದರ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರ ಹೇಳಿಕೆ ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಯಕ್ಷಗಾನವು ಕರಾವಳಿ ಕರ್ನಾಟಕದ ಗಂಡು ಕಲೆಯಾಗಿದ್ದು, ಅದು ಭಕ್ತಿ ಭಾವದಿಂದ ಕೂಡಿದ ನಮ್ಮ ಸಂಸ್ಕೃತಿಯ ಭಾಗವಾಗಿದೆ. ಯಕ್ಷಗಾನ ಕಲಾವಿದರು ಸಮಾಜಕ್ಕೆ ನೀಡಿದ ಕೊಡುಗೆಗಾಗಿಯೇ ಅವರನ್ನು ಗೌರವಯುತವಾಗಿ ಕಾಣುವ ಸಮಾಜ ನಮ್ಮದು. ಹಿಂದೂ ಪರಂಪರೆಯನ್ನು ಸದಾ ಅವಹೇಳನ ಮಾಡುವುದನ್ನೇ ಪರಮ ಗುರಿಯಾಗಿಸಿಕೊಂಡಿರುವ ಎಡಪಂಥೀಯ ಬುದ್ದಿಜೀವಿಗಳು ನೀಡಿರುವ ಹೇಳಿಕೆ ಯಕ್ಷಗಾನ ಕಲಾವಿದರಿಗೆ ಮಾತ್ರವಲ್ಲ, ಇಡೀ ಹಿಂದೂ ಸಮಾಜಕ್ಕಾದ ಅವಮಾನವಾಗಿದೆ ಎಂದು ವೇದವ್ಯಾಸ ಕಾಮತ್ ಆಕ್ರೋಷ ವ್ಯಕ್ತಪಡಿಸಿದ್ದಾರೆ. ಕರಾವಳಿಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಅವಮಾನಿಸಿದ ವ್ಯಕ್ತಿಯನ್ನು ಈ ಕೂಡಲೇ ಆ ಸ್ಥಾನದಿಂದ ಕೈಬಿಡಬೇಕು ಎಂದು ಶಾಸಕ ಕಾಮತ್ ಆಗ್ರಹಿಸಿದ್ದಾರೆ.




By
ForthFocus™