Saturday, January 17, 2026
Saturday, January 17, 2026

ರಥಬೀದಿ ಕಾಲೇಜು: ಜಾಗೃತಿ ಕಾರ್ಯಕ್ರಮ

ರಥಬೀದಿ ಕಾಲೇಜು: ಜಾಗೃತಿ ಕಾರ್ಯಕ್ರಮ

Date:

ಮಂಗಳೂರು, ಡಿ.30: ಪ್ರತಿ ಹೆಣ್ಣು ಕೂಡಾ ಮಹಿಳೆಯರ ಮತ್ತು ಹೆಣ್ಣುಮಕ್ಕಳ ಕಳ್ಳಸಾಗಣಿಕೆಯ ಕುರಿತು ತಿಳುವಳಿಕೆ ಹೊಂದಿ ಜಾಗೃತರಾಗಿರುವುದು ಪ್ರಸ್ತುತ ಪರಿಸ್ಥಿತಿಯ ಅವಶ್ಯಕತೆಯಾಗಿದೆ ಎಂಬುದಾಗಿ ಡಾ. ಪಿ. ದಯಾನಂದ ಪೈ ಪಿ ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ನಡೆದ ‘ಮಹಿಳೆಯರ ಮತ್ತು ಹೆಣ್ಣುಮಕ್ಕಳ ಕಳ್ಳಸಾಗಣೆಯ ಕುರಿತ ಜಾಗೃತಿ’ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪ್ರೊ. ಪೌಲ್ ಜಿ ಅಕ್ವಿನಸ್, ಅಧ್ಯಕ್ಷರು ಸಮಾಜಕಾರ್ಯ ವಿಭಾಗ ಮಂಗಳೂರು ವಿಶ್ವವಿದ್ಯಾನಿಲಯ ಇವರು ಹೇಳಿದರು. ಕಾರ್ಯಕ್ರಮವನ್ನು ಕಾಲೇಜಿನ ಸಮಾಜಕಾರ್ಯ ವಿಭಾಗ, ಐಕ್ಯೂಎಸಿ, ಲಯನ್ಸ್ ಕ್ಲಬ್ ಮಂಗಳೂರು, ಲಿಯೋ ಕ್ಲಬ್ ಮಂಗಳೂರು ಹಾಗೂ ಎಸ್‌ಎಐಟಿಐ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿತ್ತು. ರಾಜೇಶ್ ಕಾಮತ್ ಎಂ.ಜೆ.ಎಫ್, ಅಧ್ಯಕ್ಷರು ಲಯನ್ಸ್ ಕ್ಲಬ್ ಮಂಗಳೂರು, ಇವರು ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ. ವಹಿಸಿದ್ದರು.

ಅರುಣಾ ಕುಮಾರಿ, ಸಂಯೋಜಕರು ಎಮ್‌ಎಸ್‌ಡಬ್ಲ್ಯೂ ವಿಭಾಗ ಇವರು ಸ್ವಾಗತಿಸಿ, ವಿದ್ಯಾರ್ಥಿ ನಾಗಭೂಷಣ್ ವಂದಿಸಿದರು. ವಿದ್ಯಾರ್ಥಿ ಅವಿನಾಶ್ ಕಾರ್ಯಕ್ರಮ ನಿರೂಪಿಸಿದರು. ಸಮಾಜಕಾರ್ಯ ವಿಭಾಗದ ಬೋಧಕರು ಹಾಗೂ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!