Thursday, March 19, 2026
Thursday, March 19, 2026

ಸಮಾಜಶಾಸ್ತ್ರ ಸಿದ್ದಾಂತಗಳು ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿರಬೇಕು: ಡಾ. ಗಿರಿಧರ ರಾವ್ ಎಂ.ಎಸ್

ಸಮಾಜಶಾಸ್ತ್ರ ಸಿದ್ದಾಂತಗಳು ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿರಬೇಕು: ಡಾ. ಗಿರಿಧರ ರಾವ್ ಎಂ.ಎಸ್

Date:

ಮಂಗಳೂರು, ಮಾ.19: ಸಮಾಜಶಾಸ್ತ್ರ ಸಿದ್ಧಾಂತಗಳು ಅನ್ವಯಿಕವಾಗಿ ಬಳಕೆಯಾಗಬೇಕು ಮತ್ತು ಅವುಗಳು ಸಾಮಾಜಿಕ ಅಭಿವೃದ್ಧಿಗೆ ಅಡಿಪಾಯವಾಗಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಡಾ.ಗಿರಿಧರ ರಾವ್ ಎಂ.ಎಸ್ ಹೇಳಿದರು. ಅವರು ಡಾ. ಪಿ. ದಯಾನಂದ ಪೈ- ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಹಾಗೂ ಮಂಗಳೂರು ಸಮಾಜಶಾಸ್ತ್ರ ಸಂಘದ ಸಹಯೋಗದಲ್ಲಿ ನಡೆದ ಡಾ. ಟಿ.ಕೆ.ವಿ. ಭಟ್ ಸ್ಮಾರಕ ದತ್ತಿ ಉಪನ್ಯಾಸದಲ್ಲಿ “ಲಿಂಕಿಂಗ್‌ ಥಿಯರಿ ಟು ಪ್ರಾಕ್ಟೀಸ್‌” ಎಂಬ ವಿಷಯದ ಮೇಲೆ ಮಾತನಾಡುತ್ತಿದ್ದರು. ರಾಜಕೀಯ ನೀತಿ ರಚನೆ, ಮಹಿಳಾ ಸಬಲೀಕರಣ, ಸಮುದಾಯ ಸಬಲೀಕರಣ, ಸಮುದಾಯ ಸಹಭಾಗಿತ್ವ ಮತ್ತು ಆರೋಗ್ಯ ಅಭಿವೃದ್ಧಿಯಲ್ಲಿ ಸಮಾಜಶಾಸ್ತ್ರ ಸಿದ್ಧಾಂತಗಳ ಅನ್ವಯಿಕತೆಯ ಬಗ್ಗೆ ಅವರು ವಿವರಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ವಿಶ್ರಾಂತ ಪ್ರಾಧ್ಯಾಪಕ ಡಾ.ರಿಚರ್ಡ್‌ ಪಾಯಸ್ ಅವರು‌ ಡಾ.ಟಿ.ಕೆ.ವಿ. ಭಟ್‌ ಅವರನ್ನು ಪರಿಚಯಿಸಿ ಸಮಾಜಶಾಸ್ತ್ರಕ್ಕೆ ಅವರ ಕೊಡುಗೆಗಳನ್ನು ವಿವರಿಸಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ., ಮಂಗಳೂರು ಸಮಾಜಶಾಸ್ತ್ರ ಸಂಘದ ಅರ್ಧವಾರ್ಷಿಕ ನಿಯತಕಾಲಿಕೆ ಸಮಾಜ ಶೋಧನಾವನ್ನು ಬಿಡುಗಡೆಗೊಳಿಸಿದರು. ಮಂಗಳೂರು ವಿ.ವಿ.ಯ ಸಮಾಜಶಾಸ್ತ್ರ ಪ್ರಾಧ್ಯಾಪಕ ಪ್ರೊ. ವಿನಯ ರಜತ್‌ ಸಮಾಜ ಶೋಧನಾ ಪತ್ರಿಕೆಯನ್ನು ಪರಿಚಯಿಸಿದರು. ಡಾ. ದುಗ್ಗಪ್ಪ ಕಜೆಕಾರ್‌ ಸ್ವಾಗತಿಸಿ, ಸಮಾಜಶಾಸ್ತ್ರ ಸಂಘದ ಕಾರ್ಯದರ್ಶಿ ಡಾ. ರಾಜೇಂದ್ರ ಕೆ. ವಂದಿಸಿದರು. ಅಂತಿಮ ಬಿ.ಎ. ವಿದ್ಯಾರ್ಥಿ ಅಕ್ಷರ ಪ್ರಾರ್ಥಿಸಿ, ಪೂರ್ಣಪ್ರಜ್ಞಾ ಕಾಲೇಜಿನ ಅಧ್ಯಾಪಕ ಡಾ. ರಾಘವೇಂದ್ರ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಶ್ಚಿಮ ಏಷ್ಯಾ ಪ್ರದೇಶಗಳಿಗೆ ಇಂದಿನಿಂದ ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೇವೆ ಆರಂಭ

ನವದೆಹಲಿ, ಮಾ.19: ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಇಂದಿನಿಂದ...

ನಿಟ್ಟೆ: ಐ.ಆರ್.ಎಸ್.ಎಂ ರಾಷ್ಟ್ರೀಯ ಸಿಂಪೋಸಿಯಂ

ನಿಟ್ಟೆ, ಮಾ.19: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ನಿಟ್ಟೆ ಮಹಾಲಿಂಗ...

ಆರೋಗ್ಯ ಇಲಾಖೆಯ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಮಾ.19: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಭೀ ಕಾರ್ಯಕ್ರಮದಡಿಯಲ್ಲಿ...

ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕರಿಯರ್ ಮೇಳ

ಉಡುಪಿ ಮಾ.19: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿಪರ...
error: Content is protected !!