Saturday, June 6, 2026
Saturday, June 6, 2026

ಪ್ರಸಾದ ಎಸಳು ಚರ್ಚಾಗೋಷ್ಠಿ

ಪ್ರಸಾದ ಎಸಳು ಚರ್ಚಾಗೋಷ್ಠಿ

Date:

ಮಂಗಳೂರು, ಮಾ.21: ಪ್ರಾಚೀನ ಸಂಪ್ರದಾಯದಂತೆ ಗೋವಾದಲ್ಲಿ ಹೆಚ್ಚು ಪ್ರಚಲಿತವಿರುವ ‘ಪ್ರಸಾದ ಎಸಳು’ ಎಂಬ ಅಧ್ಯಯನದ ಬಗ್ಗೆ ಪುರೋಹಿತರ ಮೂಲಕ ಭಕ್ತನು ದೇವರಲ್ಲಿ ಪ್ರಾರ್ಥಿಸಿಕೊಂಡಾಗ ಮೂರ್ತಿ ಅಥವಾ ಪೀಠದಲ್ಲಿ ಹಚ್ಚಿದ ಹೂವಿನ ಎಸಳು ಕೆಳಗೆ ಬೀಳುತ್ತದೆ. ಈ ಸಂಪ್ರದಾಯವು ತುಂಬಾ ದೈವಿಕ ಪ್ರಜ್ನೆಯಿಂದ ಕೂಡಿದ್ದು ಇಂದು ನಶಿಸಿ ಹೋಗುತ್ತಿದೆ. ಈ ‘ಪ್ರಸಾದ ಎಸಳು’ (ಪ್ರಸಾದ ಪಾಕಳಿ) ದೈವಿಕ ಪರಿಕಲ್ಪನೆಯ ಬಗ್ಗೆ ಮಾನವಿಕಶಾಸ್ತ್ರದ ಹಿನ್ನಲೆಯಲ್ಲಿ ಸಂಶೋಧನೆ ನಡೆಸುತ್ತಿರುವ ಗೋವಾದ ಡಾ. ಬಾಲಾಜಿ ಶೆಣೈ ದೀಪ ಬೆಳಗಿಸಿ ಉದ್ಘಾಟಿಸಿದರು. ವಿವರಣಾತ್ಮಕ ಸಂಶೋಧನಾ ಅಧ್ಯಯನದ ಚರ್ಚಾಗೋಷ್ಠಿಯಲ್ಲಿ ಧಾರ್ಮಿಕ ಚಟುವಟಿಕೆಯ ಬಗ್ಗೆ ಸಭಿಕರ ಪ್ರಶ್ನೆಗಳಿಗೆ ಅವರು ಉತ್ತರಿಸುತ್ತಾ ವಿವಿಧ ದೇವಾಲಯಗಳಲ್ಲಿ ಹೂವಿನ ಎಸಳುಗಳನ್ನು ಹಚ್ಚುವ ವಿನ್ಯಾಸ ಮತ್ತು ಅರ್ಥವನ್ನು ವಿವರಿಸಿದರು.

ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷರಾದ ಸಿಎ ನಂದಗೋಪಾಲ ಶೆಣೈ ಸ್ವಾಗತಿಸಿದರು. ಹಿರಿಯರಾದ ಪಯ್ಯನೂರು ರಮೇಶ ಪೈ, ಸಿ.ಎ. ಜಯಂತ ಶೆಣೈ ನಗರ್, ಎಮ್ ಗಣೇಶ್ ಭಟ್, ವಸಂತ ಶೆಣೈ, ಸಿ.ಎ. ಎಮ್ ಎನ್ ಪೈ, ಪ್ರೊ ಪ್ರಕಾಶ ಮಲ್ಯ, ಅನ್ನು ಮಂಗಳೂರು, ಸ್ಥಳೀಯ ದೇವಸ್ಥಾನದ ಪ್ರತಿನಿಧಿಗಳು ಹಾಗೂ ಇತರ ಗಣ್ಯರು ಆಸಕ್ತ ವಿದ್ಯಾರ್ಥಿಗಳೂ ಭಾಗವಹಿಸಿದ್ದರು. ಸುಚಿತ್ರಾ ಎಸ್ ಶೆಣೈ ಕಾರ್ಯಕ್ರಮ ನಿರೂಪಿಸಿ ಅಧ್ಯಯನ ಯೋಜನೆಯ ಸಂಶೋಧಕರನ್ನು ಪರಿಚಯಿಸಿದರು. ಕೇಂದ್ರದ ಸಿ ಎ.ಒ ಡಾ. ಬಿ ದೇವದಾಸ ಪೈ ವಂದಿಸಿದರು. ಸಂಶೋಧಕ ಗೋವಾದ ಡಾ. ಬಾಲಾಜಿ ಶೆಣೈರವರನ್ನು ಸನ್ಮಾನಿಸಿ ಗೌರವಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ: ಪ್ರೊ. ನಿತ್ಯಾನಂದ ವಿ. ಗಾಂವಕರ

ತೆಂಕನಿಡಿಯೂರು, ಜೂ.5: ವಿಶ್ವಸಂಸ್ಥೆಯ ಮುಂದಾಳತ್ವದಲ್ಲಿ ಆರಂಭವಾದ ವಿಶ್ವ ಪರಿಸರ ದಿನಾಚರಣೆಯು ಇಂದು...

ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಲ್ಲಿ ನೈಸರ್ಗಿಕ ಅನಿಲ ಪತ್ತೆ: ಕೇಂದ್ರ ಸಚಿವ ಹರ್ದೀಪ್ ಪುರಿ

ನವದೆಹಲಿ, ಜೂ.5: ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಿಂದ ಸುಮಾರು 15 ಕಿಲೋಮೀಟರ್...

ಸಂತೆಕಟ್ಟೆ ಅಂಡರ್ ಪಾಸ್ ಪೂರಕ ಕಾಮಗಾರಿ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಉಡುಪಿ, ಜೂ.5: ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಅಂಡರ್ ಪಾಸ್ ಬಸ್...

ಕಾಪು: ಏಕ್ ಪೇಡ್ ಮಾ ಕೆ ನಾಮ್ ಕಾರ್ಯಕ್ರಮ

ಕಾಪು, ಜೂ.5: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಾಪು ಬಿಜೆಪಿ...
error: Content is protected !!