ಮಂಗಳೂರು, ಸೆ.16: ರಥಬೀದಿಯ ಡಾ. ಪಿ. ದಯಾನಂದ ಪೈ–ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ, ಯುವ ರೆಡ್ಕ್ರಾಸ್ ಹಾಗೂ ಮಾನಸಿಕ ಆರೋಗ್ಯ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಜಯಕರ ಭಂಡಾರಿ ಎಂ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯದ ಯುವ ರೆಡ್ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ಎನ್. ಅವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಕೆಎಂಸಿ ಆಸ್ಪತ್ರೆ, ಮಂಗಳೂರು, ಅರಿವಳಿಕೆ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ರಂಜನ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆಯ ಅಗತ್ಯತೆ, ಸರಿಯಾದ ಸಮಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಪ್ರಥಮ ಚಿಕಿತ್ಸೆಯಿಂದ ಜೀವ ಉಳಿಸುವ ಸಾಧ್ಯತೆಗಳ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಿದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ದುಗ್ಗಪ್ಪ ಕಜೆಕಾರ್, ಐಕ್ಯೂಎಸಿ ಸಂಯೋಜಕರಾದ ದೇವಿಪ್ರಸಾದ್, ಐಕ್ಯೂಎಸಿ ಸಹ-ಸಂಯೋಜಕರಾದ ಡಾ. ಜ್ಯೋತಿಪ್ರಿಯಾ ಹಾಗೂ ಮಾನಸಿಕ ಆರೋಗ್ಯ ಸಮಿತಿಯ ಸಂಯೋಜಕರಾದ ಡಾ. ಮೊಹಮ್ಮದ್ ಇಕ್ಬಾಲ್ ಬಿ.ಎ., ಯುವ ರೆಡ್ಕ್ರಾಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ಅಶೋಕ ಸಿ.ಎಚ್., ಡಾ. ಜ್ಯೋತಿ ಪಿ. ಹಾಗೂ ಮೈತ್ರಿ ಬಿ. ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿನಿಗಳಾದ ಜಯಶೀಲಾ ನಿರೂಪಿಸಿದರು. ನೇಹಾ ಸ್ವಾಗತಿಸಿ, ಖುಷಿ ವಂದಿಸಿದರು. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ 4 ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.




By
ForthFocus™