Sunday, September 22, 2024
Sunday, September 22, 2024

ಶಿರಾಡಿ ಘಾಟ್ ರಸ್ತೆ ಅಭಿವೃದ್ಧಿಗೆ 1200 ಕೋಟಿ- ಕೇಂದ್ರಕ್ಕೆ ಧನ್ಯವಾದ ಸಲ್ಲಿಸಿದ ಶಾಸಕ ಕಾಮತ್

ಶಿರಾಡಿ ಘಾಟ್ ರಸ್ತೆ ಅಭಿವೃದ್ಧಿಗೆ 1200 ಕೋಟಿ- ಕೇಂದ್ರಕ್ಕೆ ಧನ್ಯವಾದ ಸಲ್ಲಿಸಿದ ಶಾಸಕ ಕಾಮತ್

Date:

ಮಂಗಳೂರು: 1200 ಕೋಟಿ ವೆಚ್ಚದಲ್ಲಿ ಬೆಂಗಳೂರು-ಮಂಗಳೂರು ನಡುವಿನ ಶಿರಾಡಿ ಘಾಟ್ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರಕಾರ ಅನುಮೋದನೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಧನ್ಯವಾದ ಸಲ್ಲಿಸಿದ್ದಾರೆ.

ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವುದರಿಂದ ಮಂಗಳೂರು ಹಾಗೂ ಬೆಂಗಳೂರು ನಡುವಿನ ವಾಣಿಜ್ಯ ಸಂಬಂಧ ಸುಲಲಿತವಾಗುವುದು ಮಾತ್ರವಲ್ಲದೆ ಮಳೆಗಾಲದ ಸಂದರ್ಭದಲ್ಲಿ ವಾಹನ ಸಂಚಾರಕ್ಕೆ ತೊಡಕಾಗುವ ಅತೀ ದೊಡ್ಡ ಸಮಸ್ಯೆ ಪರಿಹರಿಸಿದಂತಾಗುತ್ತದೆ.

ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಜಾಗವನ್ನು ಅರಣ್ಯ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಂದ ಸ್ವಾಧೀನಪಡಿಸಿ ರಸ್ತೆ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಮುಖ್ಯಮಂತ್ರಿಯವರು ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಈ ಕಾಮಗಾರಿ ಪೂರ್ಣಗೊಳ್ಳುವ ಮೂಲಕ ಬಹುಕಾಲದ ಬೇಡಿಕೆ ಈಡೇರಿಸಿದಂತಾಗುತ್ತದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಯೋಜನೆಗೆ ಅನುಮೋದನೆ ನೀಡುವಲ್ಲಿ ಕೇಂದ್ರ ಸರಕಾರಕ್ಕೆ ಮನವರಿಕೆ ಮಾಡಿಕೊಟ್ಟ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರಿಗೆ ಹಾಗೂ ಸಹಕಾರ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಧನ್ಯವಾದ ಅರ್ಪಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!