Saturday, September 5, 2026
Saturday, September 5, 2026

ಶಿರಾಡಿ ಘಾಟ್ ರಸ್ತೆ ಅಭಿವೃದ್ಧಿಗೆ 1200 ಕೋಟಿ- ಕೇಂದ್ರಕ್ಕೆ ಧನ್ಯವಾದ ಸಲ್ಲಿಸಿದ ಶಾಸಕ ಕಾಮತ್

ಶಿರಾಡಿ ಘಾಟ್ ರಸ್ತೆ ಅಭಿವೃದ್ಧಿಗೆ 1200 ಕೋಟಿ- ಕೇಂದ್ರಕ್ಕೆ ಧನ್ಯವಾದ ಸಲ್ಲಿಸಿದ ಶಾಸಕ ಕಾಮತ್

Date:

ಮಂಗಳೂರು: 1200 ಕೋಟಿ ವೆಚ್ಚದಲ್ಲಿ ಬೆಂಗಳೂರು-ಮಂಗಳೂರು ನಡುವಿನ ಶಿರಾಡಿ ಘಾಟ್ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರಕಾರ ಅನುಮೋದನೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಧನ್ಯವಾದ ಸಲ್ಲಿಸಿದ್ದಾರೆ.

ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವುದರಿಂದ ಮಂಗಳೂರು ಹಾಗೂ ಬೆಂಗಳೂರು ನಡುವಿನ ವಾಣಿಜ್ಯ ಸಂಬಂಧ ಸುಲಲಿತವಾಗುವುದು ಮಾತ್ರವಲ್ಲದೆ ಮಳೆಗಾಲದ ಸಂದರ್ಭದಲ್ಲಿ ವಾಹನ ಸಂಚಾರಕ್ಕೆ ತೊಡಕಾಗುವ ಅತೀ ದೊಡ್ಡ ಸಮಸ್ಯೆ ಪರಿಹರಿಸಿದಂತಾಗುತ್ತದೆ.

ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಜಾಗವನ್ನು ಅರಣ್ಯ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಂದ ಸ್ವಾಧೀನಪಡಿಸಿ ರಸ್ತೆ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಮುಖ್ಯಮಂತ್ರಿಯವರು ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಈ ಕಾಮಗಾರಿ ಪೂರ್ಣಗೊಳ್ಳುವ ಮೂಲಕ ಬಹುಕಾಲದ ಬೇಡಿಕೆ ಈಡೇರಿಸಿದಂತಾಗುತ್ತದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಯೋಜನೆಗೆ ಅನುಮೋದನೆ ನೀಡುವಲ್ಲಿ ಕೇಂದ್ರ ಸರಕಾರಕ್ಕೆ ಮನವರಿಕೆ ಮಾಡಿಕೊಟ್ಟ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರಿಗೆ ಹಾಗೂ ಸಹಕಾರ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಧನ್ಯವಾದ ಅರ್ಪಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!