Wednesday, July 29, 2026
Wednesday, July 29, 2026

ಕನ್ನಡಕ್ಕೆ ಮಿರ್ಜಾ ಇಸ್ಮಾಯಿಲ್‌ ಕೊಡುಗೆ ಅನನ್ಯ

ಕನ್ನಡಕ್ಕೆ ಮಿರ್ಜಾ ಇಸ್ಮಾಯಿಲ್‌ ಕೊಡುಗೆ ಅನನ್ಯ

Date:

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಡಾ. ಪಿ. ದಯಾನಂದ ಪೈ- ಪಿ ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಜಂಟಿ ಆಶ್ರಯದಲ್ಲಿ ಸರ್ ಮಿರ್ಜಾ ಇಸ್ಮಾಯಿಲ್ ಅವರ 137ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ.ಎಂ.ಪಿ. ಶ್ರೀನಾಥ, ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ನಡುವೆ ಸಂಬಂಧ ಬೆಸೆಯಲು ಇಂತಹ ಕಾರ್ಯಕ್ರಮಗಳು ಅಗತ್ಯ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಹಿರಿಯ ವಿದ್ವಾಂಸ ಡಾ. ಪುಂಡಿಕಾಯ್ ಗಣಪಯ್ಯ ಭಟ್ ರವರು ಸರ್ ಮಿರ್ಜಾ ಇಸ್ಮಾಯಿಲ್ ಇವರು ದಿವಾನರಾಗಿ ನಾಡಿಗೆ ಹಾಗೂ ಕನ್ನಡ ನುಡಿಗೆ ನೀಡಿರುವ ಕೊಡುಗೆಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ ಇವರು ಇಂತಹ ಕಾರ್ಯಕ್ರಮಗಳು ಪ್ರತಿಯೊಂದು ಕಾಲೇಜುಗಳಲ್ಲಿ ಆಯೋಜಿಸಿ, ಸಾಹಿತ್ಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿಯನ್ನು ಹೆಚ್ಚಿಸಲು ಸಹಾಯವಾಗುತ್ತದೆ ಎಂದು ಹೇಳಿದರು.

ಡಾ. ರವಿಕುಮಾರ ಎಂ.ಪಿ., ಡಾ. ನಾಗವೇಣಿ ಮಂಚಿ, ಡಾ. ಜ್ಯೋತಿಪ್ರಿಯಾ, ರಾಜೇಶ್ವರಿ ಎಂ., ಡಾ. ಮಾಧವ ಮೂಡುಕೊಣಾಜೆ, ಡಾ. ಚಿನ್ನಸ್ವಾಮಿ ಉಪಸ್ಥಿತರಿದ್ದರು. ಪ್ರಾಧ್ಯಾಪಕಿ ಡಾ. ವಿನೋದ ಸ್ವಾಗತಿಸಿ, ಸಂತೋಷ್ ಬಿ.ಎಂ ವಂದಿಸಿದರು. ರಮ್ಯ ಆರ್. ಮತ್ತು ತಂಡದವರು ಪ್ರಾರ್ಥನೆಯನ್ನು ಹಾಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!