Thursday, June 25, 2026
Thursday, June 25, 2026

ಪಡುಗಡಲಿನಿಂದ ಕೃತಿ ಲೋಕಾರ್ಪಣೆ

ಪಡುಗಡಲಿನಿಂದ ಕೃತಿ ಲೋಕಾರ್ಪಣೆ

Date:

ಕಿನ್ನಿಗೋಳಿ: ಪಡುಗಡಲಿನಿಂದ ಕೃತಿಯಲ್ಲಿ ಕಡಲಿಗೆ ಸಂಬಂಧಿಸಿದಂತೆ ಜನಪದೀಯ ವಿಚಾರ, ವೈಚಾರಿಕ ಚಿಂತನೆ, ಸಂಸ್ಕೃತಿ-ಸಂಪ್ರದಾಯದ ವಿವರಣೆಗಳಿವೆ. ಖಾರ್ವಿಯವರು ಮೀನುಗಾರಿಕೆಯಲ್ಲಿ ಪಡೆದ ನೈಜ ಅನುಭವಗಳ ಮಿಶ್ರಣ ಈ ಕೃತಿಯಲ್ಲಿದೆ. ಮೀನುಗಾರಿಕೆ ಮತ್ತು ಕಡಲಿನ ಕುರಿತು ಇಷ್ಟು ಸಂಖ್ಯೆಯಲ್ಲಿ ಅಂಕಣಗಳನ್ನು ಬರೆದಿದ್ದು ಇದೇ ಮೊದಲು.

ಮೀನುಗಾರಿಕಾ ಪದವಿಯಲ್ಲಿ ಪಠ್ಯವಾಗುವಷ್ಟು ಪ್ರಬುದ್ಧ ಮತ್ತು ಸಮೃದ್ಧ ಸಾಹಿತ್ಯ ಇದರಲ್ಲಿದೆ ಎಂದು ಹೊಸದಿಗಂತ ಪತ್ರಿಕೆಯ ಅಂಕಣಕಾರರಾದ ಹಕ್ಲಾಡಿ‌ ಸಂದೇಶ್ ಹೆಚ್ ನಾಯ್ಕ್ ಅವರು ಹೇಳಿದರು. ಇವರು ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಕಥಾಬಿಂದು ಪ್ರಕಾಶನದವರು ಪ್ರಕಟಿಸಿರುವ ಪಡುಗಡಲಿನಿಂದ ಕೃತಿಯನ್ನು ಪರಿಚಯಿಸುತ್ತಾ ಈ ಮಾತನ್ನು ಹೇಳಿದರು.

ಮುಲ್ಲಕಾಡಿನ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ ಪದವೀಧರ ಶಿಕ್ಷಕರಾದ ನಾಗರಾಜ ಖಾರ್ವಿಯವರು ಬರೆದ ಮೂರನೆಯ ಪುಸ್ತಕ ಇದಾಗಿದ್ದು, ಕೃತಿಯನ್ನು ಯುವಲೇಖಕಿ, ಗಡಿನಾಡ ಕನ್ನಡತಿ ಡಾ. ವಾಣಿಶ್ರೀಯವರು ಬಿಡುಗಡೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಹರಿಕೃಷ್ಣ ಪುನರೂರು ಅವರು ಮಾತನಾಡುತ್ತಾ, ಇದೊಂದು ವಿಭಿನ್ನ ಕೃತಿಯಾಗಿದ್ದು ಕಡಲಿನ ಬಗ್ಗೆ ಪ್ರತಿಯೊಬ್ಬ ಕರಾವಳಿಗನೂ ತಿಳಿಯಲೇಬೇಕಾದ ವಿಚಾರ ಇದರಲ್ಲಿದೆ ಎಂದರು.

ಜಯಕಿರಣ ಪತ್ರಿಕೆಯಲ್ಲಿ ಬರುತ್ತಿದ್ದ ಸರಣಿ ಅಂಕಣಗಳಲ್ಲಿ 50 ಲೇಖನಗಳು ಪಡುಗಡಲಿನಿಂದ ಕೃತಿಯಲ್ಲಿ ಮುದ್ರಿತವಾಗಿದೆ. ಪಿ.ವಿ. ಪ್ರದೀಪ್ ಕುಮಾರ್ ಅವರ ನೇತೃತ್ವದಲ್ಲಿ ಕಥಾಬಿಂದು ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ(ರಿ.) ಹಾಗೂ ಯುಗಪುರುಷ ಸಹಯೋಗದೊಂದಿಗೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ ನಡೆಯಿತು.

ವೇದಮೂರ್ತಿ ಲಕ್ಷ್ಮೀನಾರಾಯಣ ಅಸ್ರಣ್ಣ ಕಟೀಲು ಆಶೀರ್ವಚನ ನೀಡಿದರು. ಭುವನಾಭಿರಾಮ ಉಡುಪ, ಬೈಂದೂರು ಶಿಕ್ಷಣ ಸಮನ್ವಯಧಿಕಾರಿ ಅಬ್ದುಲ್ ರವೂಫ್, ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್‌ಪೆಕ್ಟರ್ ಬಿ.ಕೆ.ನಾಯ್ಕ್, ಶಿಕ್ಷಕರಾದ ಗಿರೀಶ್ ಗೌಡ ತೋಟದ್, ಡಾ. ಶೇಖರ್ ಅಜೆಕಾರ್, ಕೆ.ವಿ. ಲಕ್ಷ್ಮಣಮೂರ್ತಿ, ಶಿಕ್ಷಕಿ ಕೃಪಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲಿಕೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರದಂತೆ ತಡೆಯಲು ಪ್ರಾಥಮಿಕ ಶಾಲೆಗಳಲ್ಲಿ ಎಐ ಬಳಕೆ ನಿಷೇಧ

ಯು.ಬಿ.ಎನ್.ಡಿ., ಜೂ.21: ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಉತ್ಪಾದಕ ಎಐ ಪರಿಕರಗಳನನ್ನು ಬಳಸದಂತೆ...

ಕಾರ್ಖಾನೆಯಲ್ಲಿ ಅಮೋನಿಯಾ ಅನಿಲ ಸೋರಿಕೆ- ಏಳು ಸಾವು

ಪೆರಿಯಪಾಳಯಂ, ಜೂಲ್.21: ತಮಿಳುನಾಡಿನ ಪೆರಿಯಪಾಳಯಂನಲ್ಲಿರುವ ಸಮುದ್ರಾಹಾರ ರಫ್ತು ಕಂಪನಿಯಲ್ಲಿ ಸಂಭವಿಸಿದ ಅಮೋನಿಯಾ...

ಬಾರಿಕೆರೆ: ಹಸಿರು ಹೆಜ್ಜೆ ಕಾರ್ಯಕ್ರಮ

ಕೋಟ, ಜೂ.21: ಪಂಚವರ್ಣ ಸಂಘಟನೆ ಆರಂಭದಲ್ಲಿ ಕೈಗೊಂಡ ಪರಿಸರದ ಕಾರ್ಯ ನಿತ್ಯ...

ಬಿಗಿ ಭದ್ರತೆಯ ನಡುವೆ ನಡೆದ NEET-UG 2026 ಮರುಪರೀಕ್ಷೆ; ಪರೀಕ್ಷೆ ಬರೆದ 20 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು

ನವದೆಹಲಿ, ಜೂ.21: ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ...
error: Content is protected !!