Wednesday, February 26, 2025
Wednesday, February 26, 2025

ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ರೋಶನ್ ಗಿಳಿಯಾರು ಆಯ್ಕೆ

ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ರೋಶನ್ ಗಿಳಿಯಾರು ಆಯ್ಕೆ

Date:

ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ.) ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ.) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ನವೆಂಬರ್ 14 ರಂದು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ನಡೆಯುವ ಉಡುಪಿ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಬಹುಮುಖ ಪ್ರತಿಭೆ ರೋಶನ್ ಗಿಳಿಯಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಸ್ತುತ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎಂಟನೇ ತರಗತಿಯ ವಿದ್ಯಾರ್ಥಿ ಆಗಿರುವ ರೋಶನ್ ಗಿಳಿಯಾರ್ ಯಕ್ಷಗಾನ, ಸಂಗೀತ, ಚಿತ್ರಕಲೆ, ಏಕಪಾತ್ರಾಭಿನಯ, ಸಿನಿಮಾ ಕ್ಷೇತ್ರ ಹೀಗೆ ಹಲವಾರು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವುದಲ್ಲದೇ, ಸಾಮಾಜಿಕ ಜಾಲತಾಣದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಕೂಡಾ ಹೊಂದಿದ್ದಾರೆ.

ನವೆಂಬರ್ 14 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ತನಕ ಕಾರ್ಯಕ್ರಮ ನಡೆಯಲಿದ್ದು ಮಕ್ಕಳ ಕವಿಗೋಷ್ಠಿ, ಬಹುವಿಧ ಗೋಷ್ಠಿ ಕಥಾ ವಾಚನ, ಸಾಂಸ್ಕೃತಿಕ ಕಾರ್ಯಕ್ರಮ, ಕನ್ನಡ ಗಾನ ನಮನ, ಕೋಶಿಕಾ ಚೇರ್ಕಾಡಿ ತಂಡದವರಿಂದ ಬೇಂದ್ರೆ ವಿರಚಿತ ಸಾಯೋ ಆಟ ನಾಟಕ ಪ್ರದರ್ಶನವಿದೆ ಎಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!