Sunday, February 23, 2025
Sunday, February 23, 2025

ಕೋಟ- ಅಭಿವಿನ್ಯಾಸ ಕಾರ್ಯಕ್ರಮ

ಕೋಟ- ಅಭಿವಿನ್ಯಾಸ ಕಾರ್ಯಕ್ರಮ

Date:

ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರ‍ೀಯ ಸೇವಾ ಯೋಜನಾ ಘಟಕ 1 ಮತ್ತು ಘಟಕ 2ರ ಉದ್ಘಾಟನೆ ಮತ್ತು ಅಭಿವಿನ್ಯಾಸ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಂದಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಮತ್ತು ರಾಷ್ಟ್ರ‍ೀಯ ಸೇವಾ ಯೋಜನಾ ಅಧಿಕಾರಿಯಾಗಿರುವ ಸಂತೋಷ್ ನಾಯಕ್‌ ಮಾತನಾಡುತ್ತಾ, ತಾನು ಬೆಳಗುವುದರೊಂದಿಗೆ ಸಮಾಜವನ್ನು ಬೆಳಗಿಸುವುದೇ ರಾಷ್ಟ್ರ‍ೀಯ ಸೇವಾ ಯೋಜನಯ ಆಶಯ.

ಭಾರತದಂತಹ ಸಾಂಪ್ರದಾಯಿಕ ದೇಶದಲ್ಲಿ ಸಮಾಜ ಸುಧಾರಣಾ ಚಳುವಳಿಯ ಸ್ವಾತಂತ್ರ್ಯ ಹೋರಾಟದ ಭವ್ಯ ಇತಿಹಾಸವಿದೆ. ಅಪೂರ್ವವಾದ ಸೇವಾ ಪರಂಪರೆ ರಾಷ್ಟ್ರ‍ೀಯ ಸೇವಾ ಯೋಜನೆಯಂತಹ ಸ್ವಯಂ ಸೇವಾ ಕಾರ್ಯದ ಉಗಮಕ್ಕೆ ಕಾರಣವಾಗಿದೆ.

ಸಹಬಾಳ್ವೆ, ಸಹಜೀವನ, ಸ್ವಾವಲಂಬನೆಯ ಪಾಠ, ಪರಿಸರ ಕಾಳಜಿ, ಸ್ವಚ್ಛತೆ, ತ್ಯಾಗ ಮನೋಭಾವನೆ, ಸಾಮರಸ್ಯ, ಶ್ರಮ ಸಂಸ್ಕೃತಿ ಇತ್ಯಾದಿ ಬದುಕಿನ ಮೌಲ್ಯಗಳನ್ನು ಎನ್.ಎಸ್.ಎಸ್. ವಿದ್ಯಾರ್ಥಿಗಳು ಯುವ ವಯಸ್ಸಿನಲ್ಲಿಯೇ ರೂಪಿಸಿಕೊಂಡು ಸಶಕ್ತ ನಾಗರಿಕರಾಗಿ ದೇಶದ ಬೆಳವಣಿಗೆಗೆ ಮತ್ತು ಕೋವಿಡ್‌ನಂತಹ ತುರ್ತು ಸಂದರ್ಭದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ಮುಖ್ಯ ಪಾತ್ರವಹಿಸುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ ಗಾಂವ್ಕರ್ ವಹಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ನಾಗರಾಜ ವೈದ್ಯ, ಐಕ್ಯೂಎಸಿ ಸಂಚಾಲಕರಾದ ರವಿಪ್ರಸಾದ್ ಏ.ಉರವ, ಎನ್.ಎಸ್.ಎಸ್ ಯೋಜನಾಧಿಕಾರಿಗಳಾದ ಡಾ. ಮುರುಳಿ ಎನ್ ಮತ್ತು ಅನಂತಕುಮಾರ್ ಸಿ.ಎಸ್, ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಪ್ರಶಾಂತ್ ನೀಲಾವರ, ಗ್ರಂಥಪಾಲಕರಾದ ಕೃಷ್ಣ ಸಾಸ್ತಾನ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!