Friday, September 20, 2024
Friday, September 20, 2024

ಕಾಗಾಲ: 15-16ನೇ ಶತಮಾನದ ಶಾಸನ ಪತ್ತೆ

ಕಾಗಾಲ: 15-16ನೇ ಶತಮಾನದ ಶಾಸನ ಪತ್ತೆ

Date:

ಕುಮಟಾ: ಕುಮಟಾ ತಾಲ್ಲೂಕಿನ ಬಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಗಾಲ ಗ್ರಾಮದ ಮಹಾದೇವಿ ಮಹಾದೇವ ಪಟಗಾರ್ ಇವರಿಗೆ ಸೇರಿದ ತೋಟದಲ್ಲಿ ಗ್ರಾನೈಟ್ (ಕಣ) ಶಿಲೆಯಲ್ಲಿ ಕೊರೆಯಲ್ಪಟ್ಟಿರುವ ಶಾಸನವೊಂದು ಪತ್ತೆಯಾಗಿದ್ದು, 4 ಅಡಿ ಎತ್ತರ ಹಾಗೂ 2 ಅಡಿ ಅಗಲವನ್ನು ಹೊಂದಿರುವ ಈ ಶಾಸನವು, 33 ಸಾಲುಗಳನ್ನು ಹೊಂದಿದ್ದು, ಕನ್ನಡ ಮತ್ತು ತಿಗಳಾರಿ ಲಿಪಿಯಲ್ಲಿದೆ.

ಶಾಸನವನ್ನು ಅಧ್ಯಯನ ಮಾಡಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಾಡದ ಇತಿಹಾಸ ಸಹಾಯಕ ಪ್ರಾಧ್ಯಾಪಕ ಮತ್ತು ಸಂಶೋಧನಾರ್ಥಿಯಾದ ರಹಿಮಾನ್ ಸಾಬ್ ಎಲ್ ಇವರು ಇದೊಂದು ದಾನ ಶಾಸನವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುತ್ತಾರೆ.

ಶಾಸನದಲ್ಲಿ ಕಂಡುಬರುವ ಸಾಲುಗಳ ಮಾಹಿತಿಯ ಆಧಾರದ ಮೇಲೆ ಗಜನಿ ಪ್ರದೇಶ ಹಾಗೂ ಇಲ್ಲಿನ ಸುತ್ತಮುತ್ತಲಿನ ಪ್ರದೇಶಗಳ ಭೂಮಿಯ ಬೆಳೆಯನ್ನು ಮತ್ತು ಅಕ್ಕಿ ಮುಡಿಯನ್ನು ವಿಶ್ವೇಶ್ವರ ಶ್ರೀಪಾದಂಗಳಿಗೆ ಮತ್ತು ಬ್ರಾಹ್ಮಣರ ಭೋಜನಕ್ಕೆ ದಾನವಾಗಿ ನೀಡಿರುವುದು ಕಂಡುಬರುತ್ತದೆ.

ಶಾಸನದ ಮೇಲ್ಭಾಗ ತೃಟಿತಗೊಂಡಿರುವರಿಂದ ದಾನವನ್ನು ಯಾರು? ಯಾವ ಕಾಲದಲ್ಲಿ ನೀಡಿದರು ಎಂಬುದು ಸ್ಪಷ್ಟವಾಗಿ ತಿಳಿದು ಬರುವುದಿಲ್ಲ.

ಆದರೆ ಲಿಪಿಯ ಆಧಾರದ ಮೇಲೆ ಈ ದಾನ ಶಾಸನವು 15-16ನೇ ಶತಮಾನಕ್ಕೆ (ವಿಜಯನಗರೋತ್ತರ ಕಾಲ) ಸೇರಿರಬಹುದೆಂದು ಸಂಶೋಧನಾರ್ಥಿಯು ತಿಳಿಸಿರುತ್ತಾರೆ. ಶಾಸನದ ಕೊನೆಯಲ್ಲಿ ಶಾಪಾಶಯ ವಾಕ್ಯವನ್ನು ಕಾಣಬಹುದು.

ಶಾಸನದಲ್ಲಿ ಕನ್ನಡ ಲಿಪಿಯ ಜೊತೆಗೆ ಕೆಲವೊಂದು ತಿಗಳಾರಿ ಲಿಪಿಯನ್ನು ಹೋಲುವ ಅಕ್ಷರಗಳು ಕಂಡುಬರುವುದರಿಂದ ಈ ಶಾಸನವು ಅಧ್ಯಯನದ ದೃಷ್ಠಿಯಿಂದ ಮಹತ್ವದ್ದೆನಿಸುತ್ತದೆ.

ಶಾಸನವನ್ನು ಓದುವಲ್ಲಿ ಪ್ಲೀಚ್ ಇಂಡಿಯಾ ಫೌಂಡೇಶನ್ ಹೈದರಾಬಾದ್ ಇಲ್ಲಿನ ಸಹಾಯಕ ಸಂಶೋಧಕರಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಸಹಕಾರ ನೀಡಿರುತ್ತಾರೆ. ಶಾಸನದ ಕ್ಷೇತ್ರಕಾರ್ಯ ಶೋಧನೆಯಲ್ಲಿ ಭಗೀರತ ಎಂ. ಗೌಡ ಹಾಗೂ ಭರತ್ ಪಟಗಾರ್ ಇವರು ಸಹಕಾರ ನೀಡಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!