Friday, September 20, 2024
Friday, September 20, 2024

ದೇಶಕ್ಕಾಗಿ ಹೋರಾಡಿದ ಸ್ಥಳೀಯ ಮಹನೀಯರನ್ನು ಗುರುತಿಸುವ ಕಾರ್ಯವಾಗಬೇಕು: ಶ್ರೀಕಾಂತ್‌ ಶೆಟ್ಟಿ

ದೇಶಕ್ಕಾಗಿ ಹೋರಾಡಿದ ಸ್ಥಳೀಯ ಮಹನೀಯರನ್ನು ಗುರುತಿಸುವ ಕಾರ್ಯವಾಗಬೇಕು: ಶ್ರೀಕಾಂತ್‌ ಶೆಟ್ಟಿ

Date:

ಕಾರ್ಕಳ: ಸ್ಥಳೀಯವಾಗಿ ಸ್ವಾತಂತ್ರ್ಯ ಹೋರಾಟಕ್ಕೆ ದುಡಿದು ಮಡಿದ ಮಹಾತ್ಮರನ್ನು ಸ್ಮರಿಸುವುದು ನಮ್ಮ ಆದ್ಯತೆಯಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕ ಸಂಘದ ಉಪಾಧ್ಯಕ್ಷ ಭಾರತೀಯ ವಾಯು ಸೇನೆಯ ಮಾಜಿ ಸೈನಿಕ ಸಾರ್ಜೆಂಟ್‌ ಶ್ರೀಕಾಂತ್‌ ಶೆಟ್ಟಿ ಬಿ ಹೇಳಿದರು.

ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ 76ನೇ ಸ್ವಾತಂತ್ರ್ಯೋತ್ಸವದ ಧ್ವಜರೋಹಣಗೈದು ಮಾತನಾಡಿದರು. ನಮ್ಮ ಸುತ್ತಮುತ್ತಲು ದೇಶಕ್ಕಾಗಿ ಹೋರಾಡಿದ ಮಹನೀಯರನ್ನು ಗುರುತಿಸಿ ಗೌರವಿಸುವ ಕಾರ್ಯವಾಗಬೇಕು. ಅನೇಕ ಮಹಾನೀಯರ ಸಾಹಸಗಳನ್ನು ಸಾದರಪಡಿಸುತ್ತಾ ದೇಶದ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂಬ ಹುಮ್ಮಸ್ಸನ್ನು ತೋರಬೇಕು ಎಂದು ವಿದ್ಯಾರ್ಥಿಗಳಿಗೆ ಕರೆನೀಡಿದರು.

ಕಾರ್ಕಳ ಜ್ಞಾನಸುಧಾ ಪಿಯು ಪ್ರಾಂಶುಪಾಲ ದಿನೇಶ್‌ ಎಂ ಕೊಡವೂರ್‌ ಮಾತನಾಡಿದರು. ಉಪಪ್ರಾಂಶುಪಾಲರಾದ ಸಾಹಿತ್ಯ, ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲರಾದ ವಾಣಿ ಕೆ., ಪಿಆರ್‌ಒ ಜ್ಯೋತಿ ಪದ್ಮನಾಭ ಭಂಡಿ, ಕಾಲೇಜಿನ ಎನ್‌.ಎಸ್.ಎಸ್‌ ಕಾರ್ಯಕ್ರಮಧಿಕಾರಿ ರವಿ ಜಿ., ಎನ್‌.ಸಿ.ಸಿ ಅಧಿಕಾರಿ ಸುಮಿತ್‌ ಈ ಉಪಸ್ಥಿತರಿದ್ದರು.

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಪ್ರಾಂಶುಪಾಲೆ ಉಷಾ ರಾವ್‌ ಯು ಸ್ವಾಗತಿಸಿ, ಆಂಗ್ಲಭಾಷಾ ಉಪನ್ಯಾಸಕಿ ಸಂಗೀತ ಕುಲಾಲ್‌ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!