Friday, September 20, 2024
Friday, September 20, 2024

ಸ್ವದೇಶಿ ಭಾವ ಯುವಜನತೆಯಲ್ಲಿ ಜಾಗೃತಿಗೊಳ್ಳಲಿ: ನಿವೃತ್ತ ಏರ್ ವೈಸ್‌ ಮಾರ್ಷಲ್‌ ರಮೇಶ್‌ ಕಾರ್ಣಿಕ್‌

ಸ್ವದೇಶಿ ಭಾವ ಯುವಜನತೆಯಲ್ಲಿ ಜಾಗೃತಿಗೊಳ್ಳಲಿ: ನಿವೃತ್ತ ಏರ್ ವೈಸ್‌ ಮಾರ್ಷಲ್‌ ರಮೇಶ್‌ ಕಾರ್ಣಿಕ್‌

Date:

ಉಡುಪಿ: ದೇಶದ ಇತಿಹಾಸವನ್ನು ಅರಿಯದೇ ಇದ್ದಲ್ಲಿ ಇತಿಹಾಸವನ್ನು ಸೃಜಿಸಲು ಅಸಾಧ್ಯ. ಹಿಂದೆ ಆದ ಐತಿಹಾಸಿಕ ದುರ್ಘಟನೆಗಳಿಂದ ಪಾಠ ಕಲಿತು ಸಂಪೂರ್ಣ ಸ್ವದೇಶಿ ಭಾವ ಭಾರತದ ಯುವಕ-ಯುವತಿಯರಲ್ಲಿ ಜಾಗೃತಗೊಂಡು ದೇಶ ಸೇವೆಯೇ ಗುರಿಯಾಗಿರಲಿ ಎಂದು ನಿವೃತ್ತ ಏರ್ ವೈಸ್‌ ಮಾರ್ಷಲ್‌ ರಮೇಶ್‌ ಕಾರ್ಣಿಕ್‌ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಸಮಾರಂಭದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರ್ಯ ದಿನದ ಸಂದೇಶ ನೀಡಿದರು. ವಿಶ್ವದ ಬಲಾಢ್ಯ ರಾಷ್ಟ್ರಗಳ ಸಾಲಿನಲ್ಲಿ ಭಾರತವು ಕಂಗೊಳಿಸುತ್ತಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರವು ಭೌಗೋಳಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಉನ್ನತಿ ಪಡೆಯಲಿ ಅದಕ್ಕೆ ಇಂದಿನ ಯುವ ಸಮೂಹವೇ ಮುಂದಾಳತ್ವ ವಹಿಸಲಿ ಎಂದು ಹಾರೈಸಿದರು.

ಕ್ರಿಯೇಟಿವ್‌ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ವಿದ್ವಾನ್‌ ಗಣಪತಿ ಭಟ್‌, ಗಣನಾಥ ಶೆಟ್ಟಿ, ಅಮೃತ್‌ ರೈ, ಆದರ್ಶ ಎಂ ಕೆ., ಅಶ್ವಥ್‌ ಎಸ್‌ ಎಲ್‌., ವಿಮಲ್‌ ರಾಜ್‌, ಗಣಪತಿ ಭಟ್‌ ಕೆ ಎಸ್‌., ಹಾಗೂ ವಿದ್ಯಾಸಂಸ್ಥೆಯ ಬೋಧಕ-ಬೋಧಕೇತರ ಸಿಬ್ಬಂದಿ, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಆಂಗ್ಲಭಾಷಾ ಉಪನ್ಯಾಸಕರಾದ ರಾಜೇಶ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ಪ್ರಸಿದ್ಧ ಹಿನ್ನಲೆ ಗಾಯಕಿ ನಿನಾದ ನಾಯಕ್‌ ಮತ್ತು ತಂಡದವರಿಂದ ದೇಶಭಕ್ತಿಯನ್ನು ಬಿಂಬಿಸುವ ಸಧಬಿರುಚಿಯ “ಕ್ರಿಯೇಟಿವ್‌ ಸವಿಗಾನ” ಸಂಗೀತ ಕಾರ್ಯಕ್ರಮ ನೆರವೇರಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!