Wednesday, February 26, 2025
Wednesday, February 26, 2025

ಯುವ ವಿಚಾರ ವೇದಿಕೆ (ರಿ.) ಕೊಳಲಗಿರಿ ಉಪ್ಪೂರು- ಗ್ರಾಮೀಣ ಕ್ರೀಡಾಕೂಟ

ಯುವ ವಿಚಾರ ವೇದಿಕೆ (ರಿ.) ಕೊಳಲಗಿರಿ ಉಪ್ಪೂರು- ಗ್ರಾಮೀಣ ಕ್ರೀಡಾಕೂಟ

Date:

ಉಪ್ಪೂರು: ಯುವ ವಿಚಾರ ವೇದಿಕೆ (ರಿ.) ಕೊಳಲಗಿರಿ ಉಪ್ಪೂರು ಇವರ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ ನಡೆಯಿತು.

ಭಾರತೀಯ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಉಪ್ಪೂರು ಗ್ರಾಮದ ನಿವೃತ್ತ ಯೋಧ ರಮೇಶ್ ಪೂಜಾರಿ ತೆಂಕಬೆಟ್ಟು ಧ್ವಜಾರೋಹಣ ನೆರವೇರಿಸಿದರು.

ಗ್ರಾಮೀಣ ಕ್ರೀಡಾ ಸ್ಪರ್ಧಾ ಕಾರ್ಯಕ್ರಮವನ್ನು ಯುವ ಉದ್ಯಮಿ ಸಂದೀಪ್ ನಾಯಕ್ ಉದ್ಘಾಟಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕೋಟ್ಯಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇನಾಯತುಲ್ಲಾ ಬೇಗ್, ಪಂಚಾಯತ್ ಸದಸ್ಯರಾದ ಅಶ್ವಿನ್ ರೋಚ್, ಸತೀಶ್ ಪೂಜಾರಿ, ದೇಹ ದಾನಿ ಸಮಾಜ ಸೇವಕ ರಮೇಶ್ ಕರ್ಕೇರಾ, ನಿರ್ವತ್ತ ಬ್ಯಾಂಕ್ ಉದ್ಯೋಗಿ ಪ್ರಭಾಕರ್ ನಾಯಕ್, ಮುಂಬೈ ಯುವ ಉದ್ಯಮಿ ಮೈಕಲ್, ವೇದಿಕೆಯ ಹಿರಿಯರಾದ ಮಾಧವ ಪಾಣ, ಮುಖ್ಯ ತೀರ್ಪುಗಾರರಾಗಿ ಆಗಮಿಸಿದ ನಾಗೇಶ್, ಉಪ್ಪೂರು ವ್ಯ.ಸೆ.ಸ.ಸಂಘ ಇದರ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸಂದೀಪ್ ಶೆಟ್ಟಿ ಹಾಗೂ ವೇದಿಕೆಯ ಅಧ್ಯಕ್ಷರಾದ ದಿನೇಶ್ ಶೆಟ್ಟಿ ಉಪಸ್ಥಿತರಿದ್ದರು.

ಕೊಳಲಗಿರಿಯ ಪುಷ್ಪಲತಾ ಸಸ್ಯಾಲಯದವರು ನೀಡಿದ ಸಸ್ಯಗಳನ್ನು ಅತಿಥಿ ಗಣ್ಯರಿಗೆ ಸ್ಮರಣಿಕೆಯಾಗಿ ನೀಡಲಾಯಿತು.

ಅಧ್ಯಕ್ಷರಾದ ದಿನೇಶ್ ಶೆಟ್ಟಿ ಸ್ವಾಗತಿಸಿದರು. ಕಾವ್ಯ ಸ್ಪರ್ಧಿಗಳ ಪಟ್ಟಿಯನ್ನು ವಾಚಿಸಿ, ಸದಾಶಿವ ಕುಮಾರ್, ಸುಬ್ರಹ್ಮಣ್ಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಯೋಗೀಶ್ ಕೊಳಲಗಿರಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!