Wednesday, February 26, 2025
Wednesday, February 26, 2025

ಜನಪರ ಸೇವೆಗಳು ಸಮಾಜದ ಸ್ವಾಸ್ಥ್ಯ ಕಾಪಾಡುತ್ತದೆ: ವರ್ಗೀಸ್ ಪಿ

ಜನಪರ ಸೇವೆಗಳು ಸಮಾಜದ ಸ್ವಾಸ್ಥ್ಯ ಕಾಪಾಡುತ್ತದೆ: ವರ್ಗೀಸ್ ಪಿ

Date:

ಕೊಡವೂರು: ಸಮಾನ ಮನಸ್ಕ ಸಂಘಟನೆಗಳ ಜನಪರ ಸೇವೆಗಳು ಸಮಾಜದ ಸ್ವಾಸ್ಥ್ಯ ಕಾಪಾಡುತ್ತದೆ. ಇಂತಹ ಅರೋಗ್ಯ ಶಿಬಿರಗಳು ನಿರಂತರ ನಡೆಯುತ್ತಿದ್ದರೆ ಸಾರ್ವಜನಿಕರಿಗೆ ಬಹಳ ಉಪಯೋಗವಾಗುವುದು ಎಂದು ಮಲ್ಪೆ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ವರ್ಗೀಸ್ ಪಿ. ಹೇಳಿದರು

ಅವರು ಸುಮನಸಾ ಕೊಡವೂರು, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯ, ಮುದ್ರಣಾಲಯಗಳ ಮಾಲಕರ ಸಂಘ ಉಡುಪಿ, ಹಳೆ ವಿದ್ಯಾರ್ಥಿ ಸಂಘ ಮಲ್ಪೆ, ಫಿಶರೀಶ್ ಶಾಲೆ ಮಲ್ಪೆ ಇವರ ಜಂಟಿ ಆಶ್ರಯದಲ್ಲಿ ಮಣಿಪಾಲ ದಂತ ವೈದ್ಯಕೀಯ ಮಹಾವಿದ್ಯಾಲಯ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಪೆ ಕೊಡವರು ಬಿ. ಉಪ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ದಂತ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ, ರಕ್ತದ ಒತ್ತಡ, ಮಧುಮೇಹ, ಬೂಸ್ಟರ್ ಲಸಿಕೆ, ಆ.ಭಾ ಕಾರ್ಡ್ ನೋಂದಾವಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಾಲಾ ಹಿರಿಯ ಶಿಕ್ಷಕಿ ಸಂಧ್ಯಾ, ಎಸ್ ಕೆಪಿಎ ಜಿಲ್ಲಾ ಜೊತೆ ಕಾರ್ಯದರ್ಶಿ ವಾಮನ್ ಪಡುಕರೆ, ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದ ಗೌರವಾಧ್ಯಕ್ಷ ಮಹೇಶ್ ಎಂ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗೋಪಾಲ್ ಸಿ ಬಂಗೇರ, ಮಲ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕುಸುಮ, ಮಣಿಪಾಲ ದಂತ ವೈದ್ಯಕೀಯ ಮಹಾವಿದ್ಯಾಲಯದ ಡಾ. ಆನಂದ್ ಪಿ ಶುಕ್ಲ, ಕಾಂತಪ್ಪ ಕರ್ಕೇರ, ಎಂ ಎಸ್ ಭಟ್ ಉಪಸ್ಥಿತರಿದ್ದರು

ಶಾಲಾ ಸಿಬ್ಬಂದಿ ವರ್ಗ ಮತ್ತು ಶಾಲಾ ಮಕ್ಕಳು, ದಂತ ವೈದ್ಯಕೀಯ ಮಹಾವಿದ್ಯಾಲಯದ ಸಿಬ್ಬಂದಿ ವರ್ಗ, ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಪೆ ಕೊಡವೂರಿನ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸುಮನಸಾ ಕೊಡವೂರು ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು ಸ್ವಾಗತಿಸಿ, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯಾಧ್ಯಕ್ಷ ಜನಾರ್ಧನ್ ಕೊಡವೂರು ವಂದಿಸಿದರು.

ಸುಮನಸಾ ಜೊತೆ ಕಾರ್ಯದರ್ಶಿ ಗಣೇಶ್ ಸಗ್ರಿ ಹಾಗೂ ಕಾರ್ಯದರ್ಶಿ ಚಂದ್ರಕಾಂತ ಕುಂದರ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!